ಶಿಕ್ಷಣ ಹಕ್ಕು ಕಾಯ್ದೆಯ ಆಧಾರದಲ್ಲಿ ಕ್ರಿಯಾ ಯೋಜನೆ ರೂಪಿಸಬೇಕು. ಸೆಕ್ಷನ್– 34ರ ಪ್ರಕಾರ ಶಾಲಾ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ಮಂಡಳಿ ರಚಿಸಿ ಶಿಕ್ಷಣ ಕಾಯ್ದೆಯ ಅನುಷ್ಠಾನ ಪರಾಮರ್ಶಿಸಬೇಕು.– ವಿ.ಪಿ.ನಿರಂಜನಾರಾಧ್ಯ, ಶಿಕ್ಷಣ ತಜ್ಞ
ಜೀವನ ನಡೆಸಲೇ ನಾವು ಕಷ್ಟ ಅನುಭವಿಸುತ್ತಿದ್ದೇವೆ. ಆದರೆ, ನಮ್ಮಂತೆ ನಮ್ಮ ಮಕ್ಕಳು ಕಷ್ಟಪಡುವುದು ಬೇಡ ಎಂದು ಖಾಸಗಿ ಶಾಲೆಗೆ ಸೇರಿಸಿದ್ದೇವೆ. ಅಲ್ಲಿ ಒಳ್ಳೆಯ ಫಲಿತಾಂಶ ಪಡೆದವರನ್ನು ನೋಡಿದ್ದೇವೆ. ಅವರಂತೆಯೇ ನಮ್ಮ ಮಕ್ಕಳು ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಇದೆ.– ಶಿವಾನಂದ ಗೊರಜನವರ, ಗೋಕುಲ ನಿವಾಸಿ, ಹುಬ್ಬಳ್ಳಿ
ನಾನು ಕಲಿತದ್ದು ಸರ್ಕಾರಿ ಶಾಲೆಯಲ್ಲೇ. ನನ್ನ ಮಗನನ್ನೂ ಅದೇ ಶಾಲೆಯಲ್ಲಿ ಓದಿಸಬೇಕೆಂದಿದ್ದೆ. ನಾವು ಕಲಿಯುವಾಗ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಶಾಲೆಯಲ್ಲೀಗ 80 ಮಕ್ಕಳಿದ್ದಾರೆ. ಒಂದರಿಂದ ಏಳನೇ ತರಗತಿಗೆ ಇಬ್ಬರೇ ಶಿಕ್ಷಕಿಯರಿದ್ದಾರೆ. ಇಂತಹ ಶಾಲೆಯಲ್ಲಿ ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣ ಸಿಗಲು ಸಾಧ್ಯ. ಹಾಗಾಗಿ ಖಾಸಗಿ ಶಾಲೆಗೆ ಸೇರಿಸಿರುವೆ.– ದೀಪಕ್ ಬಜಾಲ್, ಪಕ್ಕಲಡ್ಕ, ಮಂಗಳೂರು
ಅಕ್ಕಪಕ್ಕದ ಮನೆಯವರು ತಮ್ಮ ಮಕ್ಕಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಿದ್ದಾರೆ. ನಾವು ಮಗನನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಅವರು ಕೀಳಾಗಿ ನೋಡುತ್ತಾರೆ. ಈ ಕಾರಣಕ್ಕೆ ಇದ್ದಿದ್ದರಲ್ಲೇ ಕಡಿಮೆ ಶುಲ್ಕ ಇರುವ ಶಾಲೆಗೆ ಸೇರಿಸಿದ್ದೇವೆ.– ಪ್ರಕಾಶ್ ಕುಮಾರ್, ಶಾಮನೂರು ನಿವಾಸಿ, ದಾವಣಗೆರೆ
ಪರಿಕಲ್ಪನೆ: ಯತೀಶ್ ಕುಮಾರ್ ಜಿ.ಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.