ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಲಸಿಕೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ ಲಸಿಕೆ ವಿತರಣೆ ಸ್ಥಗಿತಗೊಳಿಸಲಾಗಿದೆ. ಅತೀ ಕಡಿಮೆ ಜನರಿಗೆ ಬಾಧಿಸುತ್ತಿರುವ ಕಾರಣ ಕಂಪನಿಗಳು ಲಸಿಕೆ ಕಂಡುಹಿಡಿಯಲು ಮುಂದಾಗುತ್ತಿಲ್ಲ. ಸರ್ಕಾರ ಸಂಶೋಧನೆಗೆ ಧನ ಸಹಾಯ ನೀಡಿದ್ದು ಖಾಸಗಿ ಕಂಪನಿಯ ಸಹಯೋಗದೊಂದಿಗೆ ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆದಿನೇಶ್ ಗುಂಡೂರಾವ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ
ಕೆಎಫ್ಡಿ ನಿಯಂತ್ರಣದ ಸಲುವಾಗಿ ಮಂಗಗಳು ಹೆಚ್ಚಿರುವ ಬೆಟ್ಟ ಪ್ರದೇಶಗಳಿಗೆ ಹೋಗದಂತೆ ನಿರ್ಬಂಧ ವಿಧಿಸಲಾಗುತ್ತಿದೆಯೇ ವಿನಃ ರೈತರಿಗೆ ವಿನಾಕಾರಣ ತೊಂದರೆಕೊಡುವ ಉದ್ದೇಶವಲ್ಲಡಾ. ಬಿ.ವಿ.ನೀರಜ್ ಜಿಲ್ಲಾ ಆರೋಗ್ಯಾಧಿಕಾರಿ ಉತ್ತರ ಕನ್ನಡ
ಶಿವಮೊಗ್ಗದಿಂದ ಕೆ.ಎಫ್.ಡಿ ಪರೀಕ್ಷೆ ವರದಿ ಬರಲು ಕನಿಷ್ಠ ಎರಡು ದಿನ ತಗಲುತ್ತದೆ. ಅಷ್ಟರೊಳಗೆ ಸೋಂಕಿತರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಕೆಎಫ್ಡಿ ಪರೀಕ್ಷೆ ನಡೆಸಲು ಪ್ರಯೋಗಾಲಯವಾಗಲಿ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆಯನ್ನಾಗಲಿ ಈ ಭಾಗದಲ್ಲಿ ಸ್ಥಾಪಿಸಲಿ.ಹಲಗೇರಿ ಭಾಗದ ಗ್ರಾಮಸ್ಥರು. ಉತ್ತರ ಕನ್ನಡ ಜಿಲ್ಲೆ
ಕೆಎಫ್ಡಿ ವೈರಸ್ ಯಾವುದೇ ಕಾರಣಕ್ಕೂ ಮನುಷ್ಯರಿಂದ ಮನುಷ್ಯರಿಗೆ ಮಂಗನಿಂದ ಮನುಷ್ಯರಿಗೆ ನೇರವಾಗಿ ಹರಡುವುದಿಲ್ಲ. ಹೀಗಾಗಿ ರೋಗ ಬಾಧಿತರಿಗೆ ಸಾಮಾಜಿಕ ಬಹಿಷ್ಕಾರ ಸಲ್ಲ. ಹೊಸದಾಗಿ ಕಾಯಿಲೆ ಕಂಡುಬಂದ ಸ್ಥಳಗಳಲ್ಲಿ ಜಾಗೃತಿ ಮೂಡಿಸಬೇಕಿದೆ.ಡಾ.ದರ್ಶನ್ ನಾರಾಯಣ ಕೆಎಫ್ಡಿ ಸಂಶೋಧನಾ ವಿಜ್ಞಾನಿ
ಕೆಎಫ್ಡಿ ವಿಚಾರದಲ್ಲಿ ಹೈಕೋರ್ಟ್ ನಿರ್ದೇಶನ ಪಾಲಿಸುವುದಾಗಿ ಪ್ರಮಾಣಪತ್ರ ಸಲ್ಲಿಸಿದ್ದ ಸರ್ಕಾರ ಇಲ್ಲಿಯವರೆಗೂ ಹಾಗೆ ನಡೆದುಕೊಂಡಿಲ್ಲ. ಸರ್ಕಾರದ ಬೇಜವಾಬ್ದಾರಿ ಮಲೆನಾಡಿನ ಜನರಲ್ಲಿ ಅತಂಕ ಸೃಷ್ಟಿಸಿದೆ.ಕೆ.ಪಿ.ಶ್ರೀಪಾಲ್ ಕೆಎಫ್ಡಿ ಜನಜಾಗೃತಿ ಒಕ್ಕೂಟದ ಸಂಚಾಲಕ ಶಿವಮೊಗ್ಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.