<p><strong>ಕಲಬುರ್ಗಿ</strong>: ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಭೀಮಾ ನದಿಯ ದಡದಲ್ಲಿರುವ 40ಕ್ಕೂ ಹೆಚ್ಚು ಗ್ರಾಮಗಳ ಮಲಿನ ನೀರು ನೇರವಾಗಿ ನದಿ ಒಡಲು ಸೇರುತ್ತಿದೆ.</p>.<p>ಪ್ರಮುಖ ಪ್ರೇಕ್ಷಣೀಯ ಸ್ಥಳಗಳಾದ ದೇವಲ ಗಾಣಗಾಪುರ ಹಾಗೂ ಘತ್ತರಗಾ ಭಾಗ್ಯವಂತಿ ದರ್ಶನಕ್ಕೆ ಬರುವ ಭಕ್ತರು ಕೂಡ ಪೂಜಾ ಸಾಮಗ್ರಿ, ಹಳೆಯ ಬಟ್ಟೆಗಳನ್ನು ನದಿಗೆ ಎಸೆದು ಮಾಲಿನ್ಯ ಮಾಡುತ್ತಿದ್ದಾರೆ. ಇದರಿಂದಾಗಿ ಸದ್ಯ ನದಿ ನೀರು ಕಲುಷಿತಗೊಂಡಿದ್ದು, ಜಾನುವಾರುಗಳು ಕುಡಿಯುವುದಕ್ಕೂ ಯೋಗ್ಯವಿಲ್ಲದಂತಾಗಿದೆ.</p>.<p>ಸೇಡಂ ಪಟ್ಟಣದ ಚರಂಡಿ ನೀರು ಹಾಗೂ ಸಿಮೆಂಟ್ ಕಾರ್ಖಾನೆಯ ತ್ಯಾಜ್ಯವನ್ನು ನೇರವಾಗಿ ಕಮಲಾವತಿ ನದಿಗೆ ಬಿಡಲಾಗುತ್ತಿದೆ. ಈ ನದಿ ಮಳೆಗಾಲದಲ್ಲಿ ಮಾತ್ರ ತುಂಬಿ ಹರಿಯುತ್ತದೆ. ಬೇಸಿಗೆಯಲ್ಲಿ ನೀರಿಗಿಂತ ತ್ಯಾಜ್ಯವೇ ಹೆಚ್ಚಾಗಿ ಗಬ್ಬೆದ್ದು ನಾರುತ್ತಿದೆ.</p>.<p>ಇನ್ನೊಂದೆಡೆ, ಕೊಪ್ಪಳ ನಗರಸಭೆ ಮತ್ತು ಭಾಗ್ಯನಗರ ಪಟ್ಟಣ ಪಂಚಾಯಿತಿಯ ಚರಂಡಿ ನೀರು ನೇರವಾಗಿ ಹಿರೇಹಳ್ಳಕ್ಕೆ ಸೇರುತ್ತಿದ್ದು, ಜಲಮೂಲಗಳು ಕಲುಷಿತಗೊಳ್ಳುತ್ತಿವೆ.</p>.<p>ಎರಡು ವರ್ಷಗಳ ಹಿಂದೆ ಗವಿಮಠದಿಂದ ಕೋಟ್ಯಂತರ ರೂಪಾಯಿ ಖರ್ಚು ಮಾಡಿ 27 ಕಿ.ಮೀ ಉದ್ದದ ಹಳ್ಳವನ್ನು ಸ್ವಚ್ಛಗೊಳಿಸಲಾಗಿತ್ತು. ಈಗ ಮತ್ತೆ ಚರಂಡಿ ನೀರು ಹಳ್ಳ ಸೇರುತ್ತಿದೆ. ನಗರದ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಹಳ್ಳಕ್ಕೆ ಬಿಡುವ ಯೋಜನೆ ಇನ್ನೂ ಪ್ರಸ್ತಾವದಲ್ಲೇ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಭೀಮಾ ನದಿಯ ದಡದಲ್ಲಿರುವ 40ಕ್ಕೂ ಹೆಚ್ಚು ಗ್ರಾಮಗಳ ಮಲಿನ ನೀರು ನೇರವಾಗಿ ನದಿ ಒಡಲು ಸೇರುತ್ತಿದೆ.</p>.<p>ಪ್ರಮುಖ ಪ್ರೇಕ್ಷಣೀಯ ಸ್ಥಳಗಳಾದ ದೇವಲ ಗಾಣಗಾಪುರ ಹಾಗೂ ಘತ್ತರಗಾ ಭಾಗ್ಯವಂತಿ ದರ್ಶನಕ್ಕೆ ಬರುವ ಭಕ್ತರು ಕೂಡ ಪೂಜಾ ಸಾಮಗ್ರಿ, ಹಳೆಯ ಬಟ್ಟೆಗಳನ್ನು ನದಿಗೆ ಎಸೆದು ಮಾಲಿನ್ಯ ಮಾಡುತ್ತಿದ್ದಾರೆ. ಇದರಿಂದಾಗಿ ಸದ್ಯ ನದಿ ನೀರು ಕಲುಷಿತಗೊಂಡಿದ್ದು, ಜಾನುವಾರುಗಳು ಕುಡಿಯುವುದಕ್ಕೂ ಯೋಗ್ಯವಿಲ್ಲದಂತಾಗಿದೆ.</p>.<p>ಸೇಡಂ ಪಟ್ಟಣದ ಚರಂಡಿ ನೀರು ಹಾಗೂ ಸಿಮೆಂಟ್ ಕಾರ್ಖಾನೆಯ ತ್ಯಾಜ್ಯವನ್ನು ನೇರವಾಗಿ ಕಮಲಾವತಿ ನದಿಗೆ ಬಿಡಲಾಗುತ್ತಿದೆ. ಈ ನದಿ ಮಳೆಗಾಲದಲ್ಲಿ ಮಾತ್ರ ತುಂಬಿ ಹರಿಯುತ್ತದೆ. ಬೇಸಿಗೆಯಲ್ಲಿ ನೀರಿಗಿಂತ ತ್ಯಾಜ್ಯವೇ ಹೆಚ್ಚಾಗಿ ಗಬ್ಬೆದ್ದು ನಾರುತ್ತಿದೆ.</p>.<p>ಇನ್ನೊಂದೆಡೆ, ಕೊಪ್ಪಳ ನಗರಸಭೆ ಮತ್ತು ಭಾಗ್ಯನಗರ ಪಟ್ಟಣ ಪಂಚಾಯಿತಿಯ ಚರಂಡಿ ನೀರು ನೇರವಾಗಿ ಹಿರೇಹಳ್ಳಕ್ಕೆ ಸೇರುತ್ತಿದ್ದು, ಜಲಮೂಲಗಳು ಕಲುಷಿತಗೊಳ್ಳುತ್ತಿವೆ.</p>.<p>ಎರಡು ವರ್ಷಗಳ ಹಿಂದೆ ಗವಿಮಠದಿಂದ ಕೋಟ್ಯಂತರ ರೂಪಾಯಿ ಖರ್ಚು ಮಾಡಿ 27 ಕಿ.ಮೀ ಉದ್ದದ ಹಳ್ಳವನ್ನು ಸ್ವಚ್ಛಗೊಳಿಸಲಾಗಿತ್ತು. ಈಗ ಮತ್ತೆ ಚರಂಡಿ ನೀರು ಹಳ್ಳ ಸೇರುತ್ತಿದೆ. ನಗರದ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಹಳ್ಳಕ್ಕೆ ಬಿಡುವ ಯೋಜನೆ ಇನ್ನೂ ಪ್ರಸ್ತಾವದಲ್ಲೇ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>