ಇದು ಸುಳ್ಳು ಸುದ್ದಿ. ವಿಕೋಪಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ 4 ಲಕ್ಷ ಪರಿಹಾರ ನೀಡಲು ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯ್ದೆಯ 12 (3) ಸೆಕ್ಷನ್ ಅಡಿಯಲ್ಲಿ ಅವಕಾಶವಿದೆ. ಇದಕ್ಕೆ ಸಂಬಂಧಿಸಿದ ಕಡತವನ್ನು, ಸರ್ಕಾರದ ಆದೇಶ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. 'ದೇಶದಾದ್ಯಂತ ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ, ಈ ಕಾಯ್ದೆ ಅಡಿ 4 ಲಕ್ಷ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ' ಎಂದು ಸುಪ್ರೀಂ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆಯಷ್ಟೆ. ಕೋವಿಡ್ನಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ನೀಡುತ್ತೇವೆ ಎಂಬ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿಲ್ಲ.