‘ಭಾರತೀಯ ಸೈನಿಕರು ಚೀನಾದ ಸೈನಿಕರ ಹತ್ಯೆ ಮಾಡಿರುವುದನ್ನು ಖಂಡಿಸಿ ಸಿಪಿಎಂ ನಾಯಕರು ಪ್ರತಿಭಟನೆ ನಡೆಸಿದ್ದರು. ಸೀತಾರಾಂ ಯೆಚೂರಿ, ವೃಂದಾ ಕಾರಟ್, ಪ್ರಕಾಶ್ ಕಾರಟ್ ಮುಂತಾದವರು ಪಾಲ್ಗೊಂಡಿದ್ದರು’ ಎಂದು ಚಿತ್ರಸಹಿತವಾದ ಸಂದೇಶ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದು ತಪ್ಪು ಮಾಹಿತಿ ನೀಡುವಂಥ ಸಂದೇಶವಾಗಿದೆ. ಕೋವಿಡ್ ಹಾಗೂ ದೇಶದ ಅರ್ಥವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸರರ್ಕಾರದ ವೈಫಲ್ಯವನ್ನು ಖಂಡಿಸಿ ಸಿಪಿಎಂ ಮುಖಂಡರು ಹಾಗೂ ಕಾರ್ಯಕರ್ತರು ಜೂನ್ 16ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದ ಚಿತ್ರಗಳನ್ನು ಬಳಸಿ ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.