<p>ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ, ಎನ್ಸಿಪಿ ನಾಯಕ ಅರ್ಬಾಜ್ ಖಾನ್ ಅವರ ಮೇಲೆ ಹಿಂದೂಗಳು ನಾಗಪುರದಲ್ಲಿ ಹಲ್ಲೆ ನಡೆಸಿದ್ದಾರೆ. ಹಿಂದೂಗಳ ತಂಟೆಗೆ ಬಂದರೆ ಎಲ್ಲರಿಗೂ ಇದೇ ಗತಿಯಾಗುತ್ತದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂದೇಶದ ಜತೆಗೆ ಹಲವು ಜನರ ಮಧ್ಯೆ ಹೊಡೆದಾಟ ನಡೆಯುತ್ತಿರುವ ವಿಡಿಯೊ ಸಹ ವೈರಲ್ ಆಗಿದೆ. ಮಹಾರಾಷ್ಟ್ರ ಬಿಜೆಪಿಯ ಕೆಲವು ನಾಯಕರು ಮತ್ತು ಕಾರ್ಯಕರ್ತರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<p>ಈ ವಿಡಿಯೊ ಮತ್ತು ವಿಡಿಯೊ ಜತೆ ಹಂಚಿಕೊಳ್ಳುತ್ತಿರುವ ಸಂದೇಶಕ್ಕೆ ಸಂಬಂಧವಿಲ್ಲ. ಹರಿಯಾಣದ ಸೊಹ್ನಾ ಬಳಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಗಲಾಟೆಯನ್ನು ಸುಳ್ಳು ಮಾಹಿತಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮಾರಾಟ ಮಾಡಲಾಗಿದ್ದ ಜಮೀನೊಂದರನ್ನು ಹಸ್ತಾಂತರ ಮಾಡುವಾಗ ಕುಟುಂಬಗಳ ಮಧ್ಯೆ ಹೊಡೆದಾಟ ನಡೆದಿದೆ. ಈ ಘಟನೆಗೂ, ಅರ್ಬಾಜ್ ಖಾನ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಆಲ್ಟ್ ನ್ಯೂಸ್ ಪ್ಯಾಕ್ಟ್ಚೆಕ್ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ, ಎನ್ಸಿಪಿ ನಾಯಕ ಅರ್ಬಾಜ್ ಖಾನ್ ಅವರ ಮೇಲೆ ಹಿಂದೂಗಳು ನಾಗಪುರದಲ್ಲಿ ಹಲ್ಲೆ ನಡೆಸಿದ್ದಾರೆ. ಹಿಂದೂಗಳ ತಂಟೆಗೆ ಬಂದರೆ ಎಲ್ಲರಿಗೂ ಇದೇ ಗತಿಯಾಗುತ್ತದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂದೇಶದ ಜತೆಗೆ ಹಲವು ಜನರ ಮಧ್ಯೆ ಹೊಡೆದಾಟ ನಡೆಯುತ್ತಿರುವ ವಿಡಿಯೊ ಸಹ ವೈರಲ್ ಆಗಿದೆ. ಮಹಾರಾಷ್ಟ್ರ ಬಿಜೆಪಿಯ ಕೆಲವು ನಾಯಕರು ಮತ್ತು ಕಾರ್ಯಕರ್ತರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<p>ಈ ವಿಡಿಯೊ ಮತ್ತು ವಿಡಿಯೊ ಜತೆ ಹಂಚಿಕೊಳ್ಳುತ್ತಿರುವ ಸಂದೇಶಕ್ಕೆ ಸಂಬಂಧವಿಲ್ಲ. ಹರಿಯಾಣದ ಸೊಹ್ನಾ ಬಳಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಗಲಾಟೆಯನ್ನು ಸುಳ್ಳು ಮಾಹಿತಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮಾರಾಟ ಮಾಡಲಾಗಿದ್ದ ಜಮೀನೊಂದರನ್ನು ಹಸ್ತಾಂತರ ಮಾಡುವಾಗ ಕುಟುಂಬಗಳ ಮಧ್ಯೆ ಹೊಡೆದಾಟ ನಡೆದಿದೆ. ಈ ಘಟನೆಗೂ, ಅರ್ಬಾಜ್ ಖಾನ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಆಲ್ಟ್ ನ್ಯೂಸ್ ಪ್ಯಾಕ್ಟ್ಚೆಕ್ ಪ್ರಕಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>