ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

fact check: ಅರ್ಬಾಜ್ ಖಾನ್ ಮೇಲೆ ಹಿಂದೂಗಳು ಹಲ್ಲೆ ನಡೆಸಿಲ್ಲ

Last Updated 27 ಡಿಸೆಂಬರ್ 2020, 19:32 IST
ಅಕ್ಷರ ಗಾತ್ರ

ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ, ಎನ್‌ಸಿಪಿ ನಾಯಕ ಅರ್ಬಾಜ್ ಖಾನ್ ಅವರ ಮೇಲೆ ಹಿಂದೂಗಳು ನಾಗಪುರದಲ್ಲಿ ಹಲ್ಲೆ ನಡೆಸಿದ್ದಾರೆ. ಹಿಂದೂಗಳ ತಂಟೆಗೆ ಬಂದರೆ ಎಲ್ಲರಿಗೂ ಇದೇ ಗತಿಯಾಗುತ್ತದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂದೇಶದ ಜತೆಗೆ ಹಲವು ಜನರ ಮಧ್ಯೆ ಹೊಡೆದಾಟ ನಡೆಯುತ್ತಿರುವ ವಿಡಿಯೊ ಸಹ ವೈರಲ್ ಆಗಿದೆ. ಮಹಾರಾಷ್ಟ್ರ ಬಿಜೆಪಿಯ ಕೆಲವು ನಾಯಕರು ಮತ್ತು ಕಾರ್ಯಕರ್ತರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಈ ವಿಡಿಯೊ ಮತ್ತು ವಿಡಿಯೊ ಜತೆ ಹಂಚಿಕೊಳ್ಳುತ್ತಿರುವ ಸಂದೇಶಕ್ಕೆ ಸಂಬಂಧವಿಲ್ಲ. ಹರಿಯಾಣದ ಸೊಹ್ನಾ ಬಳಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಗಲಾಟೆಯನ್ನು ಸುಳ್ಳು ಮಾಹಿತಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮಾರಾಟ ಮಾಡಲಾಗಿದ್ದ ಜಮೀನೊಂದರನ್ನು ಹಸ್ತಾಂತರ ಮಾಡುವಾಗ ಕುಟುಂಬಗಳ ಮಧ್ಯೆ ಹೊಡೆದಾಟ ನಡೆದಿದೆ. ಈ ಘಟನೆಗೂ, ಅರ್ಬಾಜ್ ಖಾನ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಆಲ್ಟ್‌ ನ್ಯೂಸ್ ಪ್ಯಾಕ್ಟ್‌ಚೆಕ್ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT