ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ, ಎನ್ಸಿಪಿ ನಾಯಕ ಅರ್ಬಾಜ್ ಖಾನ್ ಅವರ ಮೇಲೆ ಹಿಂದೂಗಳು ನಾಗಪುರದಲ್ಲಿ ಹಲ್ಲೆ ನಡೆಸಿದ್ದಾರೆ. ಹಿಂದೂಗಳ ತಂಟೆಗೆ ಬಂದರೆ ಎಲ್ಲರಿಗೂ ಇದೇ ಗತಿಯಾಗುತ್ತದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂದೇಶದ ಜತೆಗೆ ಹಲವು ಜನರ ಮಧ್ಯೆ ಹೊಡೆದಾಟ ನಡೆಯುತ್ತಿರುವ ವಿಡಿಯೊ ಸಹ ವೈರಲ್ ಆಗಿದೆ. ಮಹಾರಾಷ್ಟ್ರ ಬಿಜೆಪಿಯ ಕೆಲವು ನಾಯಕರು ಮತ್ತು ಕಾರ್ಯಕರ್ತರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.