ಸ್ಮೃತಿ ಇರಾನಿ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಲಾಜಿಕಲ್ ಇಂಡಿಯನ್ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ಯಾತ್ರೆ ಆರಂಭವಾದ ದಿನ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಲ್ಲಿ ವಿವೇಕಾನಂದ ಸ್ಮಾರಕಕ್ಕೆ ನಮಿಸಿದ್ದಾರೆ ಎಂದು ತಿಳಿಸಿದೆ. ಸ್ಮೃತಿ ಇರಾನಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ರಾಹುಲ್ ಗಾಂಧಿ ಅವರು ಸ್ಮಾರಕಕ್ಕೆ ಭೇಟಿ ನೀಡಿರುವ ವಿಡಿಯೊವನ್ನು ಟ್ವಿಟರ್ನಲ್ಲಿ ಪ್ರಕಟಿಸಿದೆ. ಹಲವು ಕಾಂಗ್ರೆಸ್ ಮುಖಂಡರು ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ಧಾರೆ. ಸುಳ್ಳು ಸುದ್ದಿ ಹರಡುತ್ತಿರುವಬಿಜೆಪಿ ವಿರುದ್ಧ ಮುಖಂಡರು ಕಿಡಿಕಾರಿದ್ದಾರೆ.