ಸರ್ಕಾರ ಆರಂಭಿಸಿರುವ ಹೊಸ ಯೋಜನೆಯೊಂದು ಚರ್ಚೆಯಾಗುತ್ತಿದೆ. ಈ ಕುರಿತ ಸಂದೇಶವೊಂದರಲ್ಲಿ ತಾವು ಭಾರತೀಯ ರಿಸರ್ವ್ ಬ್ಯಾಂಕ್ನ ಸಿಬ್ಬಂದಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬರು ಯೋಜನೆಯನ್ನು ವಿವರಿಸಿದ್ದಾರೆ. ₹12,500 ಹೂಡಿಕೆ ಮಾಡಿದರೆ, ಹಿಂತಿರುಗಿ ₹4.62 ಕೋಟಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಆನ್ಲೈನ್ ಬ್ಯಾಂಕ್ ಮ್ಯಾನೇಜರ್ ಅವರು ಹೂಡಿಕೆ ಮಾಡಿದವರ ಖಾತೆಗೆ ಹಣ ವರ್ಗಾವಣೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಈ ಪತ್ರದಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಚಿತ್ರವೂ ಇದೆ.
ಈ ಸಂದೇಶ ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ತಿಳಿಸಿದೆ. ಹಣ ಹೂಡಿದರೆ ಅದನ್ನು ದುಪ್ಪಟ್ಟು ಮಾಡುವುದಾಗಿ ವಂಚಕರು ಜನರಿಗೆ ಭರವಸೆ ನೀಡಲು ಆರಂಭಿಸಿದ್ದಾರೆ. ಸರ್ಕಾರಿ ಸಂಸ್ಥೆಗಳ ಹೆಸರಿನಲ್ಲಿ ಈ ದಂಧೆ ಮಾಡಲಾಗುತ್ತಿದೆ. ತಮ್ಮನ್ನು ಸರ್ಕಾರಿ ಅಧಿಕಾರಿಗಳು ಎಂದೇ ವಂಚಕರು ಹೇಳಿಕೊಳ್ಳುತ್ತಾರೆ ಎಂದು ಎಚ್ಚರಿಸಿದ್ದು, ಜನರು ಇಂತಹ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.