‘ದೆಹಲಿಯ ಜಹಾಂಗೀರ್ಪುರಿಯಲ್ಲಿ ಮಸೀದಿಯ ಕಾಂಪೌಂಡ್ ಅನ್ನು ಬುಲ್ಡೋಜರ್ನಿಂದ ಕೆಡವಿದ್ದಕ್ಕೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಸೇಡು ತೀರಿಸಿಕೊಂಡಿದೆ. ಮಸೀದಿ ಗೋಡೆ ಕೆಡವಿದ್ದಕ್ಕೆ ಪ್ರತಿಯಾಗಿ ಅಲ್ವರ್ನಲ್ಲಿ ಕಾಂಗ್ರೆಸ್ ಸರ್ಕಾರವು, 300 ವರ್ಷದ ಹಳೆಯ ಶಿವ ದೇವಾಲಯವನ್ನು ಕೆಡವಿದೆ’ ಎಂಬ ವಿವರ ಇರುವ ಸುದ್ದಿ ಹಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಬಿಜೆಪಿ ಮುಖಂಡರಾದ ಸಂಬಿತ್ ಪಾತ್ರಾ ಮತ್ತು ಗೌರವ್ ಭಾಟಿಯಾ ಅವರು ಸುದ್ದಿವಾಹಿನಿಗಳ ಚರ್ಚಾ ಕಾರ್ಯಕ್ರಮಗಳಲ್ಲಿ ಇದೇ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಆಜ್ತಕ್, ರಿಪಬ್ಲಿಕ್ ಟಿವಿ ಮತ್ತು ನ್ಯೂಸ್18 ಇಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ್ದು, ಅವುಗಳ ವಿಡಿಯೊವನ್ನು ಟ್ವೀಟ್ ಮಾಡಿವೆ.