ಇದು ಸುಳ್ಳು ಸುದ್ದಿ. ಭಾರತದಲ್ಲಿ ಕೋವಿಡ್ ಮೂರನೇ ಅಲೆ ಬಂದಿಲ್ಲ, ಅದು ತೀವ್ರತೆಯನ್ನೂ ಪಡೆದಿಲ್ಲ. ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ, ಆನ್ಲೈನ್ ತರಗತಿ ಮೊರೆ ಹೋಗಿ ಎಂದು ಕೇಂದ್ರ ಸರ್ಕಾರವು ಯಾವುದೇ ತುರ್ತು ಆದೇಶ ಹೊರಡಿಸಿಲ್ಲ. ಸರ್ಕಾರದ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ಈ ಸುಳ್ಳು ಸುದ್ದಿ ಸೃಷ್ಟಿಸಿದ್ದಾರೆ. ಈ ಸುದ್ದಿಯನ್ನು ಯಾರೂ ನಂಬಬೇಡಿ. ಶಾಲಾ-ಕಾಲೇಜುಗಳಿಗೆ ಹೋಗಿ ಎಂದು ಪಿಐಬಿ ಫ್ಯಾಕ್ಟ್ಚೆಕ್ ಪ್ರಕಟಿಸಿದೆ.