‘10 ವರ್ಷಗಳ ನಂತರ ಮೀಸಲಾತಿಯನ್ನು ಕೊನೆಗೊಳಿಸಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲಿಯೂ ಹೇಳಿಲ್ಲ’ ಎಂದು ಆಲ್ಟ್ ನ್ಯೂಸ್, ದಿ ಕ್ವಿಂಟ್ ಫ್ಯಾಕ್ಟ್ಚೆಕ್ ಪ್ರಕಟಿಸಿವೆ. ‘1932ರ ಪೂನಾ ಒಪ್ಪಂದದ ಸಂದರ್ಭದಲ್ಲಿ, ‘10 ವರ್ಷದ ನಂತರ ರಾಜಕೀಯ ಕ್ಷೇತ್ರದಲ್ಲಿನ ಮೀಸಲಾತಿಯನ್ನು ಪರಿಷ್ಕರಿಸಬೇಕು’ ಎಂದು ಅಂಬೇಡ್ಕರ್ ಹೇಳಿದ್ದರು. ಆದರೆ ಮೀಸಲಾತಿಯನ್ನು ರದ್ದುಪಡಿಸಬೇಕು ಅಥವಾ ಕೊನೆಗೊಳಿಸಬೇಕು ಎಂದು ಅವರು ಹೇಳಿರಲಿಲ್ಲ.