‘ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ಮಥುರಾದಲ್ಲಿ ಉದ್ಧಟತನ ತೋರಿದ್ದಾರೆ. ಫೆ. 23ರಂದು ಸಮಾವೇಶದಲ್ಲಿ ತಮ್ಮನ್ನು ಭೇಟಿಯಾಗಲು ಬಂದ ಅತ್ಯಾಚಾರ ಸಂತ್ರಸ್ತೆಯ ಮಾತನ್ನೂ ಕೇಳಿಸಿಕೊಳ್ಳುವ ಗೋಜಿಗೆ ಹೋಗಿಲ್ಲ. ನ್ಯಾಯ ಕೇಳಲು ಬಂದಿದ್ದ ರಾಜಸ್ಥಾನದ ಸಂತ್ರಸ್ತೆಯ ಕುಟುಂಬವನ್ನು ನಿರ್ಲಕ್ಷಿಸಿ ಮುಂದೆ ಸಾಗಿದ್ದಾರೆ. ಭೇಟಿಯಾಗಲು ಬಂದವರನ್ನು ಪೊಲೀಸರು ಬಂಧಿಸಿದ್ದಾರೆ’ ಎಂಬ ವರದಿಯನ್ನು ರಿಪಬ್ಲಿಕ್ ಭಾರತ್ ಮಾಧ್ಯಮ ಪ್ರಕಟಿಸಿದೆ. ಪ್ರಿಯಾಂಕಾ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸ್ವಲ್ಪ ಸಮಯದ ಬಳಿಕ ಈ ವರದಿಯನ್ನು ಡಿಲೀಟ್ ಮಾಡಲಾಗಿದೆ.