<p>‘ಪ್ರಧಾನಮಂತ್ರಿ ಕುಸುಮ್ ಯೋಜನೆ ಅಡಿ ರೈತರ ಹೊಲಗಳಲ್ಲಿರುವ ಕೊಳವೆ ಬಾವಿಗಳಿಗೆ ಸೋಲಾರ್ ಪಂಪ್ ಅಳವಡಿಸಲು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯವು ರೈತರಿಂದ ₹ 5,600 ಶುಲ್ಕ ಸಂಗ್ರಹಿಸಲು ಅನುಮತಿ ನೀಡಿದೆ. ಯೋಜನೆಯ ಫಲಾನುಭವಿಗಳು, ಪಂಪ್ ಅಳವಡಿಕೆಗೂ ಮುನ್ನ ಈ ಮೊತ್ತವನ್ನು ಪಾವತಿ ಮಾಡಬೇಕು. ಪಂಪ್ ಅಳವಡಿಕೆ ನಂತರ ಈ ಮೊತ್ತವನ್ನು ವಾಪಸ್ ಮಾಡಲಾಗುತ್ತದೆ. ಈ ಕೆಳಗೆ ನೀಡಲಾಗಿರುವ ಬ್ಯಾಂಕ್ ಖಾತೆಗೆ ಹಣ ಹಾಕಿ’ ಎಂಬ ವಿವರ ಇರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೇ ವಿವರ ಇರುವಆದೇಶ ಪತ್ರವೊಂದರ ಚಿತ್ರ ಸಹ ವೈರಲ್ ಆಗಿವೆ.</p>.<p>ಇದು ಸುಳ್ಳು ಸುದ್ದಿ ಎಂದು ಪಿಐಬಿ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ‘ಪ್ರಧಾನಮಂತ್ರಿ ಕುಸುಮ್ ಯೋಜನೆ ಅಡಿ ರೈತರು ತಮ್ಮ ಹೊಲಗಳಲ್ಲಿ ಸೌರ ಪಂಪ್ ಅಳವಡಿಸಿಕೊಳ್ಳಲು ಸರ್ಕಾರಕ್ಕೆ ₹5,600 ಶುಲ್ಕ ಪಾವತಿ ಮಾಡಬೇಕಿಲ್ಲ. ಈ ಸಂದೇಶ ಮತ್ತು ಪೋಸ್ಟರ್ಗಳಲ್ಲಿ ಹಂಚಿಕೊಳ್ಳಲಾಗಿರುವ ಆದೇಶ ಪತ್ರವು ನಕಲಿ. ನವೀಕರಿಸಬಹುದಾದ ಇಂಧನ ಸಚಿವಾಲಯವು ಇಂತಹ ಯಾವುದೇ ಆದೇಶ ಪತ್ರವನ್ನು ಹೊರಡಿಸಿಲ್ಲ. ಈ ಆದೇಶ ಪತ್ರದಲ್ಲಿ ಸೂಚಿಸಿರುವಂತೆ ಯಾವುದೇ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಡಿ. ಇದೊಂದು ಮೋಸದ ಜಾಲ. ಈ ಪತ್ರವನ್ನು ತೋರಿಸಿ ಯಾರಾದರೂ ಹಣ ಕೇಳಿದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡಿ. ಈಗಾಗಲೇ ಹಣ ಪಾವತಿ ಮಾಡಿರುವವರು ಸಹ, ಪತ್ರದಲ್ಲಿ ನಮೂದಿಸಿರುವ ಬ್ಯಾಂಕ್ ಖಾತೆದಾರರ ವಿರುದ್ಧ ದೂರು ದಾಖಲಿಸಿ, ಕ್ರಮ ತೆಗೆದುಕೊಳ್ಳಿ’ ಎಂದು ಪಿಐಬಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಪ್ರಧಾನಮಂತ್ರಿ ಕುಸುಮ್ ಯೋಜನೆ ಅಡಿ ರೈತರ ಹೊಲಗಳಲ್ಲಿರುವ ಕೊಳವೆ ಬಾವಿಗಳಿಗೆ ಸೋಲಾರ್ ಪಂಪ್ ಅಳವಡಿಸಲು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯವು ರೈತರಿಂದ ₹ 5,600 ಶುಲ್ಕ ಸಂಗ್ರಹಿಸಲು ಅನುಮತಿ ನೀಡಿದೆ. ಯೋಜನೆಯ ಫಲಾನುಭವಿಗಳು, ಪಂಪ್ ಅಳವಡಿಕೆಗೂ ಮುನ್ನ ಈ ಮೊತ್ತವನ್ನು ಪಾವತಿ ಮಾಡಬೇಕು. ಪಂಪ್ ಅಳವಡಿಕೆ ನಂತರ ಈ ಮೊತ್ತವನ್ನು ವಾಪಸ್ ಮಾಡಲಾಗುತ್ತದೆ. ಈ ಕೆಳಗೆ ನೀಡಲಾಗಿರುವ ಬ್ಯಾಂಕ್ ಖಾತೆಗೆ ಹಣ ಹಾಕಿ’ ಎಂಬ ವಿವರ ಇರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೇ ವಿವರ ಇರುವಆದೇಶ ಪತ್ರವೊಂದರ ಚಿತ್ರ ಸಹ ವೈರಲ್ ಆಗಿವೆ.</p>.<p>ಇದು ಸುಳ್ಳು ಸುದ್ದಿ ಎಂದು ಪಿಐಬಿ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ‘ಪ್ರಧಾನಮಂತ್ರಿ ಕುಸುಮ್ ಯೋಜನೆ ಅಡಿ ರೈತರು ತಮ್ಮ ಹೊಲಗಳಲ್ಲಿ ಸೌರ ಪಂಪ್ ಅಳವಡಿಸಿಕೊಳ್ಳಲು ಸರ್ಕಾರಕ್ಕೆ ₹5,600 ಶುಲ್ಕ ಪಾವತಿ ಮಾಡಬೇಕಿಲ್ಲ. ಈ ಸಂದೇಶ ಮತ್ತು ಪೋಸ್ಟರ್ಗಳಲ್ಲಿ ಹಂಚಿಕೊಳ್ಳಲಾಗಿರುವ ಆದೇಶ ಪತ್ರವು ನಕಲಿ. ನವೀಕರಿಸಬಹುದಾದ ಇಂಧನ ಸಚಿವಾಲಯವು ಇಂತಹ ಯಾವುದೇ ಆದೇಶ ಪತ್ರವನ್ನು ಹೊರಡಿಸಿಲ್ಲ. ಈ ಆದೇಶ ಪತ್ರದಲ್ಲಿ ಸೂಚಿಸಿರುವಂತೆ ಯಾವುದೇ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಡಿ. ಇದೊಂದು ಮೋಸದ ಜಾಲ. ಈ ಪತ್ರವನ್ನು ತೋರಿಸಿ ಯಾರಾದರೂ ಹಣ ಕೇಳಿದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡಿ. ಈಗಾಗಲೇ ಹಣ ಪಾವತಿ ಮಾಡಿರುವವರು ಸಹ, ಪತ್ರದಲ್ಲಿ ನಮೂದಿಸಿರುವ ಬ್ಯಾಂಕ್ ಖಾತೆದಾರರ ವಿರುದ್ಧ ದೂರು ದಾಖಲಿಸಿ, ಕ್ರಮ ತೆಗೆದುಕೊಳ್ಳಿ’ ಎಂದು ಪಿಐಬಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>