ರೈಲ್ವೆ ಇಲಾಖೆಯ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೇಮಕಾತಿ ಪತ್ರ ಬಂದಿದೆ. ರೈಲ್ವೆ ಇಲಾಖೆಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ‘ಗುಮಾಸ್ತ’ ಹುದ್ದೆಯನ್ನು ನೀಡಲಾಗಿದೆ. ಈ ಕುರಿತು ಆದೇಶ ಪತ್ರವನ್ನು ಕೂಡಾ ನೀಡಲಾಗಿದೆ. ‘ನಿಮ್ಮ ಕೌಶಲ ಮತ್ತು ಹಿನ್ನೆಲೆ ನಮ್ಮ ತಂಡಕ್ಕೆ ಆಸ್ತಿ ಆಗಬಲ್ಲದು ಎಂಬ ನಂಬಿಕೆ ನಮಗಿದೆ’ ಎಂದು ಪತ್ರದ ಆರಂಭದಲ್ಲಿ ಹೇಳಲಾಗಿದೆ. ಈ ಪ್ರತದ ಒಂದು ಬದಿಗೆ ‘ರೈಲ್ವೆ ಸಚಿವಾಲಯ, ಭಾರತ ಸರ್ಕಾರ, ಬೆಂಗಳೂರು’ ಎಂದು ಅಚ್ಚು ಮಾಡಲಾಗಿದೆ’.