ಗುಂಪೊಂದರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ 28 ಸೆಕೆಂಡುಗಳ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಜನರನ್ನು ಎಳೆದಾಡುವ ದೃಶ್ಯವೂ ವಿಡಿಯೊದಲ್ಲಿ ಇದೆ. ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿರುವ ವಿಡಿಯೊ ಇದು. ಈ ವಿಡಿಯೊಗೆ, ‘ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಪ್ರತಿಭಟನಕಾರರ ಮೇಲೆಯೇ ಸಮೀಕ್ಷೆ ನಡೆಸಿ, ಬುದ್ಧಿ ಕಲಿಸಿದ್ದಾರೆ’ ಎಂದು ವಿವರಣೆ ನೀಡಲಾಗಿದೆ. ಪೊಲೀಸರು ಸರಿಯಾಗಿ ಮಾಡಿದ್ದಾರೆ ಎಂದು ಹಲವರು ಟ್ವೀಟ್ ಮಾಡಿದ್ದಾರೆ.