ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್‌ಚೆಕ್:ಜ್ಞಾನವಾಪಿ ಸಮೀಕ್ಷೆ ವಿರೋಧಿಸಿದವರ ಮೇಲೆ ಲಾಠಿ ಪ್ರಹಾರ ನಿಜವೇ?

Last Updated 2 ಜೂನ್ 2022, 20:50 IST
ಅಕ್ಷರ ಗಾತ್ರ

ಗುಂಪೊಂದರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ 28 ಸೆಕೆಂಡುಗಳ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಜನರನ್ನು ಎಳೆದಾಡುವ ದೃಶ್ಯವೂ ವಿಡಿಯೊದಲ್ಲಿ ಇದೆ. ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿರುವ ವಿಡಿಯೊ ಇದು. ಈ ವಿಡಿಯೊಗೆ, ‘ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಪ್ರತಿಭಟನಕಾರರ ಮೇಲೆಯೇ ಸಮೀಕ್ಷೆ ನಡೆಸಿ, ಬುದ್ಧಿ ಕಲಿಸಿದ್ದಾರೆ’ ಎಂದು ವಿವರಣೆ ನೀಡಲಾಗಿದೆ. ಪೊಲೀಸರು ಸರಿಯಾಗಿ ಮಾಡಿದ್ದಾರೆ ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಜೊತೆ ನೀಡಲಾಗಿರುವ ಮಾಹಿತಿ ಸುಳ್ಳು ಎಂದು ‘ದಿ ಲಾಜಿಕಲ್‌ ಇಂಡಿಯನ್‌’ ವೇದಿಕೆ ವರದಿ ಮಾಡಿದೆ. ನವಭಾರತ್‌ ಟೈಮ್ಸ್‌ ವೆಬ್‌ಸೈಟ್‌ನಲ್ಲಿ ವರದಿ ಸಮೇತ ಈ ವಿಡಿಯೊವನ್ನು 2021ರ ಜುಲೈ 3ರಂದು ಪ್ರಕಟಿಸಲಾಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್‌ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚುನಾವಣೆಯ ಮತ ಎಣಿಕೆಯಲ್ಲಿ ಮೋಸ ನಡೆದಿದೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು ಎಂದು ಲಾಜಿಕಲ್ ಇಂಡಿಯನ್‌ ವರದಿಯಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT