<p>ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಜಯ ದೊರೆಯಲಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಎಂಟು ಹಂತಗಳ ಮತದಾನದಲ್ಲಿ ಈಗ ಎರಡು ಹಂತಗಳು ಮುಗಿದಿವೆ. ಪ್ರಶಾಂತ್ ಕಿಶೋರ್ ಅವರ ಐಪ್ಯಾಕ್ ಸಂಸ್ಥೆಯು ನಡೆಸಿದೆ ಎನ್ನಲಾದ ಸಮೀಕ್ಷೆಯ ವಿವರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಶಾಂತ್ ಅವರು ಮಮತಾ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಮೀಕ್ಷೆಯ ಪ್ರಕಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಬಾರಿ ಸೋಲೊಪ್ಪಲಿದ್ದಾರೆ. ಈ ವಿವರಗಳನ್ನು ಹಲವರು ಹಂಚಿಕೊಂಡಿದ್ದಾರೆ. ‘ಕಿಶೋರ್ ಅವರ ಆಂತರಿಕ ಸಮೀಕ್ಷೆ ಸೋರಿಕೆಯಾಗಿದ್ದು, ಮಮತಾ ಸೋಲಲಿದ್ದಾರೆ’ ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.</p>.<p>ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆಯು ಪರಿಶೀಲನೆ ನಡೆಸಿದಾಗ, ಸಮೀಕ್ಷೆಯು ನಕಲಿ ಎಂಬುದು ಕಂಡುಬಂದಿದೆ. ತೃಣಮೂಲ ಕಾಂಗ್ರೆಸ್ ಪಕ್ಷವು ಹೆಚ್ಚಾಗಿ ಟಿಎಂಸಿ ಎಂದು ಉಲ್ಲೇಖಿಸುತ್ತದೆ. ಆದರೆ ಸಮೀಕ್ಷೆಯಲ್ಲಿ ಎಐಟಿಸಿ ಎಂದು ಉಲ್ಲೇಖಿಸಲಾಗಿದೆ. ಐಪ್ಯಾಕ್ ಸಂಸ್ಥೆ ಸಹ ಸಮೀಕ್ಷೆಯನ್ನು ನಕಲಿ ಎಂದು ಖಚಿತಪಡಿಸಿದೆ. ಹತಾಶೆಯಲ್ಲಿರುವ ಬಿಜೆಪಿಯು ನಕಲಿ ಸಮೀಕ್ಷೆ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದೆ. ಇದು ಬಿಜೆಪಿಯ ವ್ಯವಸ್ಥಿತ ಷಡ್ಯಂತ್ರ ಎಂದು ಟಿಎಂಸಿ ಖಂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಜಯ ದೊರೆಯಲಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಎಂಟು ಹಂತಗಳ ಮತದಾನದಲ್ಲಿ ಈಗ ಎರಡು ಹಂತಗಳು ಮುಗಿದಿವೆ. ಪ್ರಶಾಂತ್ ಕಿಶೋರ್ ಅವರ ಐಪ್ಯಾಕ್ ಸಂಸ್ಥೆಯು ನಡೆಸಿದೆ ಎನ್ನಲಾದ ಸಮೀಕ್ಷೆಯ ವಿವರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಶಾಂತ್ ಅವರು ಮಮತಾ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಮೀಕ್ಷೆಯ ಪ್ರಕಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಬಾರಿ ಸೋಲೊಪ್ಪಲಿದ್ದಾರೆ. ಈ ವಿವರಗಳನ್ನು ಹಲವರು ಹಂಚಿಕೊಂಡಿದ್ದಾರೆ. ‘ಕಿಶೋರ್ ಅವರ ಆಂತರಿಕ ಸಮೀಕ್ಷೆ ಸೋರಿಕೆಯಾಗಿದ್ದು, ಮಮತಾ ಸೋಲಲಿದ್ದಾರೆ’ ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.</p>.<p>ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆಯು ಪರಿಶೀಲನೆ ನಡೆಸಿದಾಗ, ಸಮೀಕ್ಷೆಯು ನಕಲಿ ಎಂಬುದು ಕಂಡುಬಂದಿದೆ. ತೃಣಮೂಲ ಕಾಂಗ್ರೆಸ್ ಪಕ್ಷವು ಹೆಚ್ಚಾಗಿ ಟಿಎಂಸಿ ಎಂದು ಉಲ್ಲೇಖಿಸುತ್ತದೆ. ಆದರೆ ಸಮೀಕ್ಷೆಯಲ್ಲಿ ಎಐಟಿಸಿ ಎಂದು ಉಲ್ಲೇಖಿಸಲಾಗಿದೆ. ಐಪ್ಯಾಕ್ ಸಂಸ್ಥೆ ಸಹ ಸಮೀಕ್ಷೆಯನ್ನು ನಕಲಿ ಎಂದು ಖಚಿತಪಡಿಸಿದೆ. ಹತಾಶೆಯಲ್ಲಿರುವ ಬಿಜೆಪಿಯು ನಕಲಿ ಸಮೀಕ್ಷೆ ಮೂಲಕ ಜನರ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದೆ. ಇದು ಬಿಜೆಪಿಯ ವ್ಯವಸ್ಥಿತ ಷಡ್ಯಂತ್ರ ಎಂದು ಟಿಎಂಸಿ ಖಂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>