<p>ಗಾಜಿಯಾಬಾದ್ನ ಸಂಸದ ಹಾಗೂ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಸಹೋದರ ಕೋವಿಡ್ ಪೀಡಿತನಾಗಿದ್ದು, ಹಾಸಿಗೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ವತಃ ಸಿಂಗ್ ಅವರೇ ಟ್ವೀಟ್ ಮಾಡಿ, ಸಹಾಯ ಮಾಡುವಂತೆ ಜಿಲ್ಲಾಧಿಕಾರಿಗೆ ಕೇಳಿಕೊಂಡಿದ್ದಾರೆ ಎನ್ನಲಾದ ಟ್ವೀಟ್ನ ಸ್ಕ್ರೀನ್ಶಾಟ್ ಸಾಕಷ್ಟು ವೈರಲ್ ಆಗಿದೆ. ಮಾಜಿ ಸಚಿವರ ಸ್ಥಿತಿಯೇ ಹೀಗಿದೆ ನೋಡಿ ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಗಾಜಿಯಾಬಾದ್ನಲ್ಲಿ ಕೊರೊನಾ ಭೀಕರ ರೂಪ ತಾಳಿದೆ ಎಂಬುದಾಗಿ ಚರ್ಚೆಯಾಗುತ್ತಿದೆ.</p>.<p>ವಿ.ಕೆ. ಸಿಂಗ್ ಟ್ವೀಟ್ ಬಗ್ಗೆ ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್ ತಂಡವು ಪರಿಶೀಲನೆ ನಡೆಸಿದೆ. ಸಿಂಗ್ ಅವರು ಮತ್ತೊಬ್ಬ ವ್ಯಕ್ತಿಯ ಪರವಾಗಿ ಟ್ವೀಟ್ ಮಾಡಿದ್ದರು. ಆ ವ್ಯಕ್ತಿಯ ಸಹೋದರನಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಅಗತ್ಯವಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿ ಎಂದು ಅವರು ಜಿಲ್ಲಾಧಿಕಾರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಆದರೆ ಈ ಟ್ವೀಟ್ ಗೊಂದಲ ಮೂಡಿಸುವಂತಿತ್ತು. ಸಿಂಗ್ ಅವರ ಸ್ವಂತ ಸಹೋದರನಿಗೇ ಈ ಸಮಸ್ಯೆ ಆಗಿದೆ ಎಂಬ ಅರ್ಥ ಕೊಡುವಂತಿತ್ತು. ವಿವಾದ ಆಗುತ್ತಿದ್ದಂತೆ ಎಚ್ಚೆತ್ತ ಅವರು ಟ್ವೀಟ್ ಅಳಿಸಿ ಹಾಕಿದ್ದಾರೆ. ಅದಕ್ಕೆ ಸ್ಪಷ್ಟನೆ ನೀಡುವ ಟ್ವೀಟ್ ಅನ್ನೂ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಾಜಿಯಾಬಾದ್ನ ಸಂಸದ ಹಾಗೂ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಸಹೋದರ ಕೋವಿಡ್ ಪೀಡಿತನಾಗಿದ್ದು, ಹಾಸಿಗೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ವತಃ ಸಿಂಗ್ ಅವರೇ ಟ್ವೀಟ್ ಮಾಡಿ, ಸಹಾಯ ಮಾಡುವಂತೆ ಜಿಲ್ಲಾಧಿಕಾರಿಗೆ ಕೇಳಿಕೊಂಡಿದ್ದಾರೆ ಎನ್ನಲಾದ ಟ್ವೀಟ್ನ ಸ್ಕ್ರೀನ್ಶಾಟ್ ಸಾಕಷ್ಟು ವೈರಲ್ ಆಗಿದೆ. ಮಾಜಿ ಸಚಿವರ ಸ್ಥಿತಿಯೇ ಹೀಗಿದೆ ನೋಡಿ ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಗಾಜಿಯಾಬಾದ್ನಲ್ಲಿ ಕೊರೊನಾ ಭೀಕರ ರೂಪ ತಾಳಿದೆ ಎಂಬುದಾಗಿ ಚರ್ಚೆಯಾಗುತ್ತಿದೆ.</p>.<p>ವಿ.ಕೆ. ಸಿಂಗ್ ಟ್ವೀಟ್ ಬಗ್ಗೆ ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್ ತಂಡವು ಪರಿಶೀಲನೆ ನಡೆಸಿದೆ. ಸಿಂಗ್ ಅವರು ಮತ್ತೊಬ್ಬ ವ್ಯಕ್ತಿಯ ಪರವಾಗಿ ಟ್ವೀಟ್ ಮಾಡಿದ್ದರು. ಆ ವ್ಯಕ್ತಿಯ ಸಹೋದರನಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಅಗತ್ಯವಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿ ಎಂದು ಅವರು ಜಿಲ್ಲಾಧಿಕಾರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಆದರೆ ಈ ಟ್ವೀಟ್ ಗೊಂದಲ ಮೂಡಿಸುವಂತಿತ್ತು. ಸಿಂಗ್ ಅವರ ಸ್ವಂತ ಸಹೋದರನಿಗೇ ಈ ಸಮಸ್ಯೆ ಆಗಿದೆ ಎಂಬ ಅರ್ಥ ಕೊಡುವಂತಿತ್ತು. ವಿವಾದ ಆಗುತ್ತಿದ್ದಂತೆ ಎಚ್ಚೆತ್ತ ಅವರು ಟ್ವೀಟ್ ಅಳಿಸಿ ಹಾಕಿದ್ದಾರೆ. ಅದಕ್ಕೆ ಸ್ಪಷ್ಟನೆ ನೀಡುವ ಟ್ವೀಟ್ ಅನ್ನೂ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>