ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್‌ಚೆಕ್ | ಉತ್ತರ ಪ್ರದೇಶದಲ್ಲಿ ಸಾಧುಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿಲ್ಲ

Last Updated 13 ಮೇ 2020, 3:05 IST
ಅಕ್ಷರ ಗಾತ್ರ
ADVERTISEMENT
""

ಉತ್ತರ ಪ್ರದೇಶದ ವೃಂದಾವನದಲ್ಲಿ ಮೂವರು ಸಾಧುಗಳನ್ನು ಬಾಂಗ್ಲಾದೇಶಿ ಮುಸ್ಲಿಮರು ಹತ್ಯೆ ಮಾಡಿದ್ದಾರೆ. ಹತ್ಯೆಕೋರರು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಸುಮ್ಮನೆ ಕುಳಿತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಖದಿಂದ ರಕ್ತ ಸುರಿಯುತ್ತಿರುವ ಸಾಧುಗಳ ಚಿತ್ರವೂ ವೈರಲ್ ಆಗಿದೆ.

ಈ ಸುದ್ದಿ ಸುಳ್ಳು ಎಂದು ಮಥುರಾ ಪೊಲೀಸರು ಟ್ವೀಟ್ ಮಾಡಿದ್ದಾರೆ. ‘ಆಸ್ತಿ ವ್ಯಾಜ್ಯದ ಕಾರಣ ಸಾಧುಗಳು ಮತ್ತು ದೇವಾಲಯದ ಟ್ರಸ್ಟಿಗಳು ಪರಸ್ಪ‍ರ ಹೊಡೆದಾಡಿಕೊಂಡಿದ್ದಾರೆ. ಸಾಧುಗಳು ಗಾಯಗೊಂಡಿದ್ದಾರೆ ಅಷ್ಟೆ, ಜೀವಹಾನಿ ಆಗಿಲ್ಲ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟ್ರಸ್ಟಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈ ಹಲ್ಲೆಯಲ್ಲಿ ಮುಸ್ಲಿಮರ ಪಾತ್ರವಿಲ್ಲ’ ಎಂದು ಟ್ವೀಟ್‌ನಲ್ಲಿ ವಿವರಿಸಲಾಗಿದೆ.

ಮಥುರಾ ಪೊಲೀಸರು ಟ್ವೀಟ್ ಮಾಡಿರುವ ಹೇಳಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT