‘ಈ ವಿಡಿಯೊಗೂ, ಮಹಾರಾಷ್ಟ್ರ ಸರ್ಕಾರದ ಪ್ರಸ್ತುತ ಬಿಕ್ಕಟ್ಟಿಗೂ ಯಾವುದೇ ಸಂಬಂಧವಿಲ್ಲ. ಇದು 2019ರ ಮಾರ್ಚ್ 1ರ ವಿಡಿಯೊ. ಬೃಹನ್ ಮುಂಬೈ ನಗರ ಪಾಲಿಕೆ ನಿರ್ಮಿಸಿದ್ದ ಸಮುದಾಯ ಭವನ ಒಂದರ ಉದ್ಘಾಟನೆ ಸಮಾರಂಭದಲ್ಲಿ ದೀಪ ಬೆಳಗಿಸುವ ವಿಚಾರಕ್ಕಾಗಿ ಎನ್ಸಿಪಿ ಮತ್ತು ಶಿವಸೇನಾ ನಾಯಕರ ಮಧ್ಯೆ ಹೊಡೆದಾಟ ನಡೆದಿತ್ತು. 2019ರ ಮಾರ್ಚ್ನಲ್ಲಿ ಶಿವಸೇನಾ–ಎನ್ಸಿಪಿ–ಕಾಂಗ್ರೆಸ್ ಮೈತ್ರಿಕೂಟದ ಎಂವಿಎ ಸರ್ಕಾರ ಅಸ್ತಿತ್ವಕ್ಕೇ ಬಂದಿರಲಿಲ್ಲ. ಹಳೆಯ ವಿಡಿಯೊವನ್ನು ತಪ್ಪು ಮಾಹಿತಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ’ ಎಂದು ‘ದಿ ಲಾಜಿಕಲ್ ಇಂಡಿಯನ್’ ಫ್ಯಾಕ್ಟ್ಚೆಕ್ ಪ್ರಕಟಿಸಿದೆ.