ಜಿತೇಂದ್ರ ಸಿಂಗ್ ಅವರು ರಾಹುಲ್ ಅವರ ಷೂಲೇಸ್ ಕಟ್ಟಿದ್ದಾರೆ ಎಂಬುದು ಸುಳ್ಳು ಎಂದು ‘ಆಲ್ಟ್ ನ್ಯೂಸ್’ ವರದಿ ಮಾಡಿದೆ. ಮತ್ತೊಂದು ಮಗ್ಗುಲಿನ ದೃಶ್ಯವನ್ನು ಪೋಸ್ಟ್ ಮಾಡಿರುವ ಜಿತೇಂದ್ರ ಸಿಂಗ್, ‘ನನ್ನ ಕಾಲಿನ ಷೂಲೇಸ್ ಅನ್ನು ನಾನು ಕಟ್ಟಿಕೊಂಡೆ. ಇದನ್ನು ಬಿಜೆಪಿ ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ. ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿ, ಸುಳ್ಳುಗಳನ್ನು ಹೆಣೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಅವರು, ಮತ್ತೊಂದು ಆಯಾಮದ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.