ಟ್ವಿಟರ್ನಲ್ಲಿ ಚರ್ಚೆಯಾಗುತ್ತಿರುವ ಹಾಗೆ ಬಿರಿಯಾನಿಯಲ್ಲಿ ಸಂತಾನ ಶಕ್ತಿ ಹರಣ ಮಾತ್ರೆಗಳನ್ನು ಬೆರೆಸಲಾಗುತ್ತಿದೆ ಎಂಬ ಮಾಹಿತಿ ಸುಳ್ಳು ಎಂದು ಚೆನ್ನೈನ ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ಸ್ಪಷ್ಪಪಡಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ‘ಆರೋಪ ಕೇಳಿಬಂದ ಬಿರಿಯಾನಿ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದ್ದೇವೆ. ನಗರದ ಯಾವುದೇ ರೆಸ್ಟೋರೆಂಟ್, ಹೋಟೆಲ್ ಅಥವಾ ಉಪಹಾರ ಮಂದಿರಗಳ ವಿರುದ್ಧ ಯಾರೂ ದೂರು ನೀಡಿಲ್ಲ. ಈ ವದಂತಿಯನ್ನು ನಂಬಬೇಡಿ’ ಎಂದು ಅವರು ಮನವಿ ಮಾಡಿದ್ದಾರೆ.