ಇದು ತಿರುಚಲಾದ ವಿಡಿಯೊ ಎಂದು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ಸುಧೀರ್ ಚೌಧರಿ ಹಂಚಿಕೊಂಡಿರುವ ವಿಡಿಯೊ ಪೂರ್ಣವಲ್ಲ. ಪೂರ್ಣ ವಿಡಿಯೊ 43 ಸೆಕೆಂಡ್ಗಳಷ್ಟು ದೀರ್ಘವಾಗಿದೆ. ಅದರಲ್ಲಿ ಟಿಕಾಯತ್ ಅವರು, ‘ಈ ಸರ್ಕಾರವು ನೂತನ ಕೃಷಿ ಕಾಯ್ದೆಗಳನ್ನು ತರುವ ಮೂಲಕ ಅರ್ಧ ದೇಶವನ್ನು ಮಾರಾಟ ಮಾಡಿದೆ. ಹೀಗಾಗಿ ನಾವು ಅವರ ವಿರುದ್ಧ ಹೋರಾಡುತ್ತಿದ್ದೇವೆ. ಕೇಂದ್ರ ಸರ್ಕಾರದ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳು. ನೀವು ಈಗ ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು. ಇಲ್ಲದಿದ್ದಲ್ಲಿ ನಿಮ್ಮ ಕತೆಯೂ ಮುಗಿಯುತ್ತದೆ’ ಎಂದು ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಕೊನೆಯ ಎರಡು ವಾಕ್ಯಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು, ತಪ್ಪು ಅರ್ಥ ಬರುವ ರೀತಿಯಲ್ಲಿ ವಿಡಿಯೊವನ್ನು ತಿರುಚಲಾಗಿದೆ ಎಂದು ದಿ ಲಾಜಿಕಲ್ ಇಂಡಿಯನ್ ಹೇಳಿದೆ.