‘ಕೇರಳದಲ್ಲಿ ಓಂಕಾರವನ್ನು ನಿಷೇಧಿಸಬೇಕು ಎಂದು ಕೇರಳ ಮುಸ್ಲಿಮರು ಆಗ್ರಹಿಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಮೇಲೆ ಓಂಕಾರವನ್ನು ಬರೆದಿದ್ದ ಇಬ್ಬರು ಶಿಕ್ಷಕರನ್ನು ರಜೆ ಮೇಲೆ ಕಳುಹಿಸಲಾಗಿದೆ’ ಎಂಬ ಬರಹ ಇರುವ ಸುದ್ದಿವಾಹಿನಿಗಳ ವರದಿಗಳ ಸ್ಕ್ರೀನ್ಶಾಟ್ಗಳನ್ನು ಆಧರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪೋಸ್ಟ್ಗಳನ್ನು ಮಾಡಿದ್ದಾರೆ. ‘ಕೇರಳದಲ್ಲಿ ಮುಸ್ಲಿಮರ ಜನಸಂಖ್ಯೆ ಪ್ರಮಾಣ ಶೇ 40ರಷ್ಟನ್ನು ದಾಟಿದೆ.ಕೇರಳದಲ್ಲಿ ಈಗ ಹಿಂದೂ ಧರ್ಮ ಅಪಾಯದಲ್ಲಿದೆ. ಇಂತಹ ಸಂದರ್ಭದಲ್ಲೂ ಜಾತ್ಯತೀತ ನಿಲುವುಗಳನ್ನು ಪಾಲಿಸಬೇಕೆ? ನಮ್ಮ ಧರ್ಮವನ್ನು ನಾವು ರಕ್ಷಿಸಿಕೊಳ್ಳುವುದೆ, ಬೇಡವೇ’ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.