<p>ಹೆಚ್ಚು ಜನಸಂಖ್ಯೆ ಇರುವ ಉತ್ತರ ಪ್ರದೇಶ ರಾಜ್ಯವು ಮೂರು ಹೋಳಾಗಲಿದೆ. ರಾಜ್ಯವನ್ನು ಒಡೆದು ಮೂರು ಪ್ರತ್ಯೇಕ ರಾಜ್ಯ ಮಾಡಲಾಗುತ್ತದೆ. ಉತ್ತರ ಪ್ರದೇಶ, ಪೂರ್ವಾಂಚಲ ಮತ್ತು ಬುಂದೇಲ್ಖಂಡ ರಾಜ್ಯಗಳು ಜನ್ಮತಾಳಲಿವೆ. ಈ ಬಗ್ಗೆ ಕೇಂದ್ರ ಸರ್ಕಾರವು ಪ್ರಸ್ತಾವ ಇಟ್ಟಿದೆ – ಎಂಬ ಪೋಸ್ಟ್ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಸಾಕಷ್ಟು ಓಡಾಡುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯ ವಿಭಜನೆ ನಡೆಯಲಿದೆ ಎಂದು ಚರ್ಚೆಯಾಗುತ್ತಿದೆ.</p>.<p>ಈ ಸಂದೇಶ ಸುಳ್ಳು ಎಂದು ತಿಳಿಸುವ ಪುರಾವೆಗಳನ್ನು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆ ಒದಗಿಸಿದೆ. ಕೇಂದ್ರ ಯಾವುದೇ ಪ್ರಸ್ತಾವ ಕಳುಹಿಸಿಲ್ಲ ಎಂದು ಜೂನ್ 12ರಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿತ್ತು. ಸಚಿವ ಸಿದ್ಧಾರ್ಥನಾಥ್ ಸಿಂಗ್ ಅವರು ಈ ಸಂದೇಶ ಸುಳ್ಳು ಎಂದು ತಿಳಿಸಿದ್ದಾರೆ. ಪಿಐಬಿ ಹಾಗೂ ಕೇಂದ್ರ ಸರ್ಕಾರದ ಸಾರ್ವಜನಿಕ ಸಂಪರ್ಕ ಇಲಾಖೆ ಸಹ ಇದು ಸುಳ್ಳು ಎಂದಿವೆ. 2011ರಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ ಅವರು ರಾಜ್ಯ ವಿಭಜಿಸಿ ನಾಲ್ಕು ರಾಜ್ಯಗಳನ್ನು ಸೃಷ್ಟಿಸುವ ಪ್ರಸ್ತಾವ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೆಚ್ಚು ಜನಸಂಖ್ಯೆ ಇರುವ ಉತ್ತರ ಪ್ರದೇಶ ರಾಜ್ಯವು ಮೂರು ಹೋಳಾಗಲಿದೆ. ರಾಜ್ಯವನ್ನು ಒಡೆದು ಮೂರು ಪ್ರತ್ಯೇಕ ರಾಜ್ಯ ಮಾಡಲಾಗುತ್ತದೆ. ಉತ್ತರ ಪ್ರದೇಶ, ಪೂರ್ವಾಂಚಲ ಮತ್ತು ಬುಂದೇಲ್ಖಂಡ ರಾಜ್ಯಗಳು ಜನ್ಮತಾಳಲಿವೆ. ಈ ಬಗ್ಗೆ ಕೇಂದ್ರ ಸರ್ಕಾರವು ಪ್ರಸ್ತಾವ ಇಟ್ಟಿದೆ – ಎಂಬ ಪೋಸ್ಟ್ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಸಾಕಷ್ಟು ಓಡಾಡುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯ ವಿಭಜನೆ ನಡೆಯಲಿದೆ ಎಂದು ಚರ್ಚೆಯಾಗುತ್ತಿದೆ.</p>.<p>ಈ ಸಂದೇಶ ಸುಳ್ಳು ಎಂದು ತಿಳಿಸುವ ಪುರಾವೆಗಳನ್ನು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆ ಒದಗಿಸಿದೆ. ಕೇಂದ್ರ ಯಾವುದೇ ಪ್ರಸ್ತಾವ ಕಳುಹಿಸಿಲ್ಲ ಎಂದು ಜೂನ್ 12ರಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿತ್ತು. ಸಚಿವ ಸಿದ್ಧಾರ್ಥನಾಥ್ ಸಿಂಗ್ ಅವರು ಈ ಸಂದೇಶ ಸುಳ್ಳು ಎಂದು ತಿಳಿಸಿದ್ದಾರೆ. ಪಿಐಬಿ ಹಾಗೂ ಕೇಂದ್ರ ಸರ್ಕಾರದ ಸಾರ್ವಜನಿಕ ಸಂಪರ್ಕ ಇಲಾಖೆ ಸಹ ಇದು ಸುಳ್ಳು ಎಂದಿವೆ. 2011ರಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ ಅವರು ರಾಜ್ಯ ವಿಭಜಿಸಿ ನಾಲ್ಕು ರಾಜ್ಯಗಳನ್ನು ಸೃಷ್ಟಿಸುವ ಪ್ರಸ್ತಾವ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>