ಲಾಕ್ಡೌನ್ ಪರಿಣಾಮದಿಂದ ದೇಶದಾದ್ಯಂತ ವಲಸೆ ಕಾರ್ಮಿಕರ ಕರುಣಾಜನಕ ಕಥೆಗಳದ್ದೇ ಸುದ್ದಿ. ಕಾರ್ಮಿಕ ಮಹಿಳೆಯೊಬ್ಬರು ತನ್ನ ಹಸುಗೂಸನ್ನು ಬೆನ್ನಿಗೆ ಕಟ್ಟಿಕೊಂಡುಸೈಕಲ್ತುಳಿಯುತ್ತಿರುವ ಚಿತ್ರವನ್ನು ಕಾಂಗ್ರೆಸ್ ಮುಖಂಡ ರಣದೀಪ್ ಸರ್ಜೇವಾಲಾ ಟ್ವೀಟ್ ಮಾಡಿದ್ದಾರೆ. ‘ಇದು ಹೊಸ ಭಾರತದ ನೈಜತೆ’ ಎಂದು ಉಲ್ಲೇಖಿಸಿದ್ದಾರೆ. ಈ ಟ್ವೀಟ್ 190 ಬಾರಿ ರಿಟ್ವೀಟ್ ಆಗಿದೆ. ಸರ್ಜೇವಾಲಾ ಅವರು ಟ್ವೀಟ್ ಮಾಡಿದ ಸ್ವಲ್ಪ ಸಮಯದಲ್ಲೇ ಅದನ್ನು ಅಳಿಸಿ ಹಾಕಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣವನ್ನೂ ಅವರು ನೀಡಿಲ್ಲ.