ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಎಎಪಿ ಸಂಸದ ಭಗವಂತ್ ಮಾನ್ ಅವರು ಮದ್ಯದಂಗಡಿ ಮುಂದೆ ಕುಳಿತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬಿಜೆಪಿ ನಾಯಕರಾದ ನವೀನ್ ಕುಮಾರ್ ಜಿಂದಾಲ್ ಮತ್ತು ಇಂಪ್ರೀತ್ ಸಿಂಗ್ ಭಕ್ಷಿ ಅವರು ಸೇರಿ ಹಲವರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ತಮ್ಮ ನೆಚ್ಚಿನ ಜಾಗದಲ್ಲಿ ಕುಳಿತಿದ್ದಾರೆ ಎಂಬ ಅಡಿ ಬರಹವನ್ನು ಈ ಚಿತ್ರಕ್ಕೆ ನೀಡಲಾಗಿದೆ. ಕೇಜ್ರಿವಾಲ್ ಸರ್ಕಾರದ ಮದ್ಯ ನೀತಿಯನ್ನು ಮುಂದಿಟ್ಟುಕೊಂಡು ಅವರನ್ನು ಲೇವಡಿ ಮಾಡಲಾಗಿದೆ.