ಕೋವಿಡ್ ಎರಡನೇ ಅಲೆಯು ದೇಶದಲ್ಲಿ ಸಾವಿರಾರು ಜನರನ್ನು ಬಲಿ ಪಡೆಯಿತು. ಅದೇ ಹೊತ್ತಿಗೆ ಎದುರಾದ ಆಮ್ಲಜನಕ ಕೊರತೆಯು ಇನ್ನಷ್ಟು ಸಾವುನೋವಿಗೆ ಕಾರಣವಾಯಿತು. ಆದರೆ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದು ಒಬ್ಬರು ಮಾತ್ರ ಎಂದು ಸರ್ಕಾರ ತಿಳಿಸಿದೆ ಎಂದು ಇಂಗ್ಲಿಷ್ ನಿಯತಕಾಲಿಕಔಟ್ಲುಕ್ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ವೆಬ್ಸೈಟ್ ಉಲ್ಲೇಖಿಸಿದೆ.