ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಾಪಸ್ಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬಿಕ್ಕಟ್ಟು ಸೃಷ್ಟಿಸಿದೆ. ರೈತರು ಬೀಡುಬಿಟ್ಟಿರುವ ಸಿಂಘು ಗಡಿಯಲ್ಲಿ ಕಾರ್ಯಾಚರಣೆ ನಡೆಸಲು ಕೇಂದ್ರ ಸರ್ಕಾರವು ಅರೆಸೇನಾಪಡೆಯನ್ನು ನಿಯೋಜಿಸಲಿದೆ. ಅಲ್ಲದೆ ಪಂಜಾಬ್ ಹಾಗೂ ಹರಿಯಾಣದಲ್ಲಿ ಕರ್ಫ್ಯೂ ವಿಧಿಸಲು ಯೋಚಿಸಿದೆ. ಹೀಗೆ ಹೇಳುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.