ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಅರವಿಂದ ಪನಗರಿಯಾ ಹಾಗೂ ಎನ್ಸಿಎಇಆರ್ ಮಹಾನಿರ್ದೇಶಕಿ ಪೂನಂ ಗುಪ್ತಾ ಅವರು ‘ಭಾರತ ನೀತಿ ವೇದಿಕೆ’ಗೆ ಸಲ್ಲಿಸಿರುವ ವರದಿಯಲ್ಲಿ, ಎಸ್ಬಿಐ ಬಿಟ್ಟು ಉಳಿದ ಬ್ಯಾಂಕ್ಗಳ ಖಾಸಗೀಕರಣಕ್ಕೆ ಪ್ರಸ್ತಾವ ಇರಿಸಿದ್ದರು. ಈ ಪ್ರಸ್ತಾವವನ್ನೇ ನಿರ್ಧಾರ ಎಂಬುದಾಗಿ ತಪ್ಪಾಗಿ ವರದಿ ಮಾಡಲಾಗಿದೆ. ಖಾಸಗೀಕರಣದ ಬಗ್ಗೆ ಸರ್ಕಾರ ಈವರೆಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಸಚಿವ ಭಾಗವತ್ ಕರಾಡ್ ಅವರು ಲೋಕಸಭೆಗೆ ತಿಳಿಸಿದ್ದರು. ಈ ಪ್ರಕ್ರಿಯೆ ಆರಂಭಿಸಬೇಕಾದರೆ, ಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ ತರಬೇಕಿದೆ ಎಂಬುದನ್ನು ಅವರು ಉಲ್ಲೇಖಿಸಿದ್ದರು.