ದೇಶದ ಸರ್ವೋಚ್ಛ ನ್ಯಾಯಾಲಯವಾಗಿರುವ ಸುಪ್ರೀಂ ಕೋರ್ಟ್ ದೆಹಲಿಯಲ್ಲಿದ್ದು, ದೇಶದ ಇತರ ಭಾಗಗಳಲ್ಲೂ ಅದರ ಪೀಠ ರಚನೆ ಮಾಡುವ ಪ್ರಸ್ತಾವವಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಇಂತಹ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಕೋಲ್ಕತ್ತ, ಚೆನ್ನೈ ಹಾಗೂ ಮುಂಬೈ ನಗರಗಳಲ್ಲಿ ಸುಪ್ರೀಂ ಕೋರ್ಟ್ನ ಶಾಖೆಗಳು ರಚನೆಯಾಗಲಿವೆ ಎಂಬ ಉಲ್ಲೇಖವಿದೆ. ದೇಶದ ವಿವಿಧ ಭಾಗದ ಜನರು ಅರ್ಜಿ ಸಲ್ಲಿಸಲು ದೆಹಲಿಗೆ ಹೋಗುವ ಅನಿವಾರ್ಯತೆ ಇನ್ನು ಇರುವುದಿಲ್ಲ ಎಂದು ಹೇಳಲಾಗಿದೆ.