ಈ ಸುದ್ದಿಯನ್ನು ಪುಷ್ಠೀಕರಿಸುವ ಯಾವುದೇ ವರದಿಗಳು ಪ್ರಸ್ತುತ ಪ್ರಕಟವಾಗಿಲ್ಲ ಎಂದು ಲಾಜಿಕಲ್ ಇಂಡಿಯನ್ಸ್ ವೆಬ್ಸೈಟ್ ತಿಳಿಸಿದೆ. ಧ್ವಜಾರೋಹಣ ಮಾಡದ ಮದರಸಾ ಬಂದ್ ಮಾಡುವ ಆದೇಶ ಹೊರಡಿಸಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರದ ಮಾಧ್ಯಮ ಸಲಹೆಗಾರ ಮೃತ್ಯುಂಜಯ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂತಹ ವರದಿಯನ್ನು ರಾಜ್ಯ ಮದರಸಾ ಮಂಡಳಿ ಹಿರಿಯ ಮುಖಂಡ ಎ.ಕೆ. ತಿವಾರಿ ಅಲ್ಲಗಳೆದಿದ್ದಾರೆ. ಆದರೆ 2017ರಲ್ಲಿ ಯೋಗಿ ಸರ್ಕಾರವು ಆಗಸ್ಟ್ 15ರಂದು ಧ್ವಜಾರೋಹಣ ಮಾಡಿ, ಜನಗಣಮನ ಹಾಡುವಂತೆ ಮದರಸಾಗಳಿಗೆ ಸೂಚಿಸಿತ್ತು ಎಂದು ಜೀ ನ್ಯೂಸ್ ವರದಿ ಮಾಡಿತ್ತು. ಗಣರಾಜ್ಯದ ದಿವಸ ದೇಶದ ಎಲ್ಲ ಮದರಸಾಗಳು ತಿರಂಗಾ ಹಾರಿಸಬೇಕು ಎಂದು 2016ರಲ್ಲಿ ಆರ್ಎಸ್ಎಸ್ ಅಂಗಸಂಸ್ಥೆ ಮುಸ್ಲಿಂ ರಾಷ್ಟ್ರೀಯ ಮಂಚ್ ಸೂಚಿಸಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿತ್ತು. ಆದರೆ, ಸೂಚನೆ ಪಾಲಿಸದ ಮದರಸಾ ಬಂದ್ ಮಾಡುವ ಆದೇಶ ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದೆ.