ಗುಂಪೊಂದು ವೇದಿಕೆಗೆ ಹತ್ತಿ, ವೇದಿಕೆಯನ್ನು ಧ್ವಂಸಗೊಳಿಸುವ ಮತ್ತು ಬಿಜೆಪಿ ಬ್ಯಾನರನ್ನು ಹರಿಯುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬಳಿಕ ಹರಿಯಾಣದಲ್ಲಿ ರೈತರು ನಡೆದುಕೊಂಡ ರೀತಿ ಇದು ಎಂದು ಹೇಳಲಾಗಿದೆ. ‘ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಹೇಳಿದ ಬಳಿಕ ಈ ರೀತಿಯ ಘಟನೆಗಳು ನಡೆಯುತ್ತಿವೆ. ಮಾಧ್ಯಮಗಳು ಇವನ್ನು ತೋರಿಸುವುದಿಲ್ಲ’ ಎಂದು ಅಡಿ ಬರಹ ನೀಡಲಾಗಿದೆ.