‘ಇದು ಸುಳ್ಳು ಸುದ್ದಿ’ ಎಂದು ಆಲ್ಟ್ ನ್ಯೂಸ್ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ‘ವಿಯೆಟ್ನಾಂನ ಮೈ ಸಾನ್ ಸೈಟ್ನ ಇಂದ್ರವರ್ಮ ಎಂಬ ರಾಜ ನಿರ್ಮಿಸಿದ್ದ ದೇವಾಲಯಗಳ ಸಂಕೀರ್ಣದ ಜೀರ್ಣೋದ್ಧಾರ ಕಾರ್ಯ 2020ರಲ್ಲಿ ಆರಂಭವಾಗಿತ್ತು. ಭಾರತೀಯ ಪುರಾತತ್ವ ಇಲಾಖೆಯು ಈ ಕಾರ್ಯದ ನೇತೃತ್ವ ವಹಿಸಿಕೊಂಡಿತ್ತು. ಈ ಬಗ್ಗೆ ಕೇಂದ್ರ ಸಚಿವರಾಗಿದ್ದ ಪ್ರಹ್ಲಾದ್ ಸಿಂಗ್ ಪಟೇಲ್ ಅವರು 2020ರ ಮೇ 29ರಂದು ಟ್ವೀಟ್ ಮಾಡಿದ್ದರು. ಅವರು ಟ್ವೀಟ್ ಮಾಡಿದ್ದ ಶಿವಲಿಂಗದ ಚಿತ್ರವನ್ನು ಬಳಸಿಕೊಂಡು, ಸುಳ್ಳು ಸುದ್ದಿ ಸೃಷ್ಟಿಸಲಾಗಿದೆ. ಅದನ್ನು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ’ ಎಂದು ಆಲ್ಟ್ ನ್ಯೂಸ್ ವಿವರಿಸಿದೆ.