<p>ಬೆಂಗಳೂರು: ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ ಹಮ್ಮಿಕೊಂಡಿರುವ ‘ಬಂಡಾಯ ಸಾಹಿತ್ಯ: ಹೊಸ ತಲೆಮಾರು’ ಅಭಿಯಾನವನ್ನು ವಿವಿಧ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದೆ.</p>.<p>ಈ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಮಾರ್ಚ್ 15ರಂದು ಚಾಲನೆ ದೊರೆತಿತ್ತು. ಸಾಹಿತ್ಯ, ಸಮಾಜ ಮತ್ತು ಜನಸಂಸ್ಕೃತಿಗಳ ಬಗ್ಗೆ ತಾತ್ವಿಕ ತಿಳಿವಳಿಕೆ ಮೂಡಿಸುವುದು ಈ ಅಭಿಯಾನದ ಪ್ರಮುಖ ಆಶಯವಾಗಿದೆ.</p>.<p>‘ಇದೇ 25ರಂದು ತುಮಕೂರಿನಲ್ಲಿ ‘ಕನ್ನಡ ಸಾಹಿತ್ಯದಲ್ಲಿ ಚರಿತ್ರೆ ಮತ್ತು ಪುರಾಣ ಪಯಣ: ಸಾಮಾಜಿಕ ನೆಲೆಗಳು’ ಎಂಬ ವಿಷಯದ ಮೇಲೆ, 26ರಂದು ರಾಯಚೂರಿನಲ್ಲಿ ‘ಆಧುನಿಕ ಕನ್ನಡ ಸಾಹಿತ್ಯ: ಸಾಮಾಜಿಕ ನಿಲುವಿನ ನಡಿಗೆ’ ಎಂಬ ವಿಷಯದ ಮೇಲೆ ಒಂದು ದಿನದ ವಿಚಾರಸಂಕಿರಣಗಳು ನಡೆಯಲಿವೆ’ ಎಂದು ಸಂಘಟನೆ ಪರವಾಗಿ ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.</p>.<p>‘ಮೇ 23ರಂದು ಬೆಳಗಾವಿಯಲ್ಲಿ ‘ಕನ್ನಡ ಸಿನಿಮಾ: ಪ್ರಗತಿಪರ ನೆಲೆಗಳ ಸ್ವರೂಪ’ ಎಂಬ ವಿಷಯದ ಮೇಲೆ, ಜೂನ್ ತಿಂಗಳ ಮೊದಲ ವಾರ ಚಿತ್ರದುರ್ಗದಲ್ಲಿ ‘ಸೃಜನಶೀಲತೆ: ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ’ ವಿಷಯದ ಮೇಲೆ ವಿಚಾರಸಂಕಿರಣ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಜೂನ್ ತಿಂಗಳ ಮೂರನೇ ವಾರ ದಾವಣಗೆರೆಯಲ್ಲಿ ಹೊಸತಲೆಮಾರಿನ ಸಾಹಿತಿಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ಕಡೆ ಯುವ ಪ್ರತಿಭೆಗಳನ್ನು ಒಳಗೊಂಡ ಕವಿಗೋಷ್ಠಿಗಳು ನಡೆಯಲಿವೆ. ಆಸಕ್ತರು ಭಾಗವಹಿಸಬೇಕು’ ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-44-1434823061</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ ಹಮ್ಮಿಕೊಂಡಿರುವ ‘ಬಂಡಾಯ ಸಾಹಿತ್ಯ: ಹೊಸ ತಲೆಮಾರು’ ಅಭಿಯಾನವನ್ನು ವಿವಿಧ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದೆ.</p>.<p>ಈ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಮಾರ್ಚ್ 15ರಂದು ಚಾಲನೆ ದೊರೆತಿತ್ತು. ಸಾಹಿತ್ಯ, ಸಮಾಜ ಮತ್ತು ಜನಸಂಸ್ಕೃತಿಗಳ ಬಗ್ಗೆ ತಾತ್ವಿಕ ತಿಳಿವಳಿಕೆ ಮೂಡಿಸುವುದು ಈ ಅಭಿಯಾನದ ಪ್ರಮುಖ ಆಶಯವಾಗಿದೆ.</p>.<p>‘ಇದೇ 25ರಂದು ತುಮಕೂರಿನಲ್ಲಿ ‘ಕನ್ನಡ ಸಾಹಿತ್ಯದಲ್ಲಿ ಚರಿತ್ರೆ ಮತ್ತು ಪುರಾಣ ಪಯಣ: ಸಾಮಾಜಿಕ ನೆಲೆಗಳು’ ಎಂಬ ವಿಷಯದ ಮೇಲೆ, 26ರಂದು ರಾಯಚೂರಿನಲ್ಲಿ ‘ಆಧುನಿಕ ಕನ್ನಡ ಸಾಹಿತ್ಯ: ಸಾಮಾಜಿಕ ನಿಲುವಿನ ನಡಿಗೆ’ ಎಂಬ ವಿಷಯದ ಮೇಲೆ ಒಂದು ದಿನದ ವಿಚಾರಸಂಕಿರಣಗಳು ನಡೆಯಲಿವೆ’ ಎಂದು ಸಂಘಟನೆ ಪರವಾಗಿ ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.</p>.<p>‘ಮೇ 23ರಂದು ಬೆಳಗಾವಿಯಲ್ಲಿ ‘ಕನ್ನಡ ಸಿನಿಮಾ: ಪ್ರಗತಿಪರ ನೆಲೆಗಳ ಸ್ವರೂಪ’ ಎಂಬ ವಿಷಯದ ಮೇಲೆ, ಜೂನ್ ತಿಂಗಳ ಮೊದಲ ವಾರ ಚಿತ್ರದುರ್ಗದಲ್ಲಿ ‘ಸೃಜನಶೀಲತೆ: ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ’ ವಿಷಯದ ಮೇಲೆ ವಿಚಾರಸಂಕಿರಣ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಜೂನ್ ತಿಂಗಳ ಮೂರನೇ ವಾರ ದಾವಣಗೆರೆಯಲ್ಲಿ ಹೊಸತಲೆಮಾರಿನ ಸಾಹಿತಿಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ಕಡೆ ಯುವ ಪ್ರತಿಭೆಗಳನ್ನು ಒಳಗೊಂಡ ಕವಿಗೋಷ್ಠಿಗಳು ನಡೆಯಲಿವೆ. ಆಸಕ್ತರು ಭಾಗವಹಿಸಬೇಕು’ ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-44-1434823061</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>