<p>ಬ್ರಹ್ಮಾವರ: ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊಂಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.</p>.<p>ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ಎಸ್.ಎಂ.ಎಸ್ ಮಕ್ಕಳ ಮಂಟಪದಲ್ಲಿ ಈಚೆಗೆ ನಡೆದ ಭೂಮಿಕಾ ಹಾರಾಡಿ ರಂಗಭೂಮಿ ಸಂಸ್ಥೆಯ ನಾಟಕೋತ್ಸವ ‘ಬಣ್ಣ -12’ರ ಸಮಾಪನ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಂಗಭೂಮಿಯ ನಿರಂತರ ಬೆಳವಣಿಗೆಗೆ ಪ್ರೇಕ್ಷಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಭೂಮಿಕಾ ಹಾರಾಡಿ ಸಂಸ್ಥೆಯ ಸಂಚಾಲಕ ರಾಮ್ ಶೆಟ್ಟಿ ಹಾಗೂ ಅವರ ತಂಡದ ಶ್ರಮದ ಫಲವಾಗಿ ಈ ನಾಟಕೋತ್ಸವ 12ನೇ ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದರು.</p>.<p>ಸಾಮಾಜಿಕ ಪಿಡುಗುಗಳ ಬಗ್ಗೆ ಜನರನ್ನು ಎಚ್ಚರಿಸುವ ಸಂದೇಶವನ್ನು ಹೊತ್ತ ನಾಟಕಗಳ ಪ್ರದರ್ಶನ ನಡೆಯಬೇಕು. ಇಂದಿನ ಯುವಪೀಳಿಗೆಗೆ ನೈತಿಕ ಮೌಲ್ಯಗಳನ್ನು ಬಿತ್ತುವ ಈ ಕಾರ್ಯ ನಿರಂತರವಾಗಿ ರಂಗಭೂಮಿಯಿಂದ ನಡೆಯಲಿ ಎಂದು ಹೇಳಿದರು.</p>.<p>ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಮಾತನಾಡಿ, ಭೂಮಿಕಾ ಹಾರಾಡಿಯ ಪರಿಶ್ರಮವನ್ನು ಆರಂಭದಿಂದಲೂ ಕಂಡಿದ್ದೇನೆ. ಒಂದು ನಾಟಕದಿಂದ ಆರಂಭಗೊಂಡ ಈ ನಾಟಕೋತ್ಸವ ಇಂದು 51 ನಾಟಕಗಳನ್ನು ಪ್ರದರ್ಶನ ಮಾಡಿದೆ. ನಿಜಕ್ಕೂ ಶ್ಲಾಘನೀಯ ಕೆಲಸವನ್ನು ಮಾಡಿದೆ ಎಂದರು.</p>.<p>ಭೂಮಿಕಾದ ಅಧ್ಯಕ್ಷ ಆರ್.ಎಂ. ಸಾಮಗ, ಗೌರವಾಧ್ಯಕ್ಷ ರವಿ ಎಸ್. ಪೂಜಾರಿ, ಕೋಶಾಧಿಕಾರಿ ಶ್ರೀಹರಿ ಭಟ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರೀಶ್ ಕಿರಣ್ ತುಂಗ ಸ್ವಾಗತಿಸಿದರು. ಸಂಚಾಲಕ ಬಿ.ಎಸ್. ರಾಮ್ ಶೆಟ್ಟಿ ಹಾರಾಡಿ ವಂದಿಸಿದರು.</p>.<p>ಸಭಾ ಕಾರ್ಯಕ್ರಮದ ಬಳಿಕ ಭೂಮಿಕಾ ಹಾರಾಡಿ ತಂಡದಿಂದ ‘ಸುಯೋಧನ’ ನಾಟಕ ಪ್ರದರ್ಶನಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-28-1662256459</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊಂಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.</p>.<p>ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ಎಸ್.ಎಂ.ಎಸ್ ಮಕ್ಕಳ ಮಂಟಪದಲ್ಲಿ ಈಚೆಗೆ ನಡೆದ ಭೂಮಿಕಾ ಹಾರಾಡಿ ರಂಗಭೂಮಿ ಸಂಸ್ಥೆಯ ನಾಟಕೋತ್ಸವ ‘ಬಣ್ಣ -12’ರ ಸಮಾಪನ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಂಗಭೂಮಿಯ ನಿರಂತರ ಬೆಳವಣಿಗೆಗೆ ಪ್ರೇಕ್ಷಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಭೂಮಿಕಾ ಹಾರಾಡಿ ಸಂಸ್ಥೆಯ ಸಂಚಾಲಕ ರಾಮ್ ಶೆಟ್ಟಿ ಹಾಗೂ ಅವರ ತಂಡದ ಶ್ರಮದ ಫಲವಾಗಿ ಈ ನಾಟಕೋತ್ಸವ 12ನೇ ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದರು.</p>.<p>ಸಾಮಾಜಿಕ ಪಿಡುಗುಗಳ ಬಗ್ಗೆ ಜನರನ್ನು ಎಚ್ಚರಿಸುವ ಸಂದೇಶವನ್ನು ಹೊತ್ತ ನಾಟಕಗಳ ಪ್ರದರ್ಶನ ನಡೆಯಬೇಕು. ಇಂದಿನ ಯುವಪೀಳಿಗೆಗೆ ನೈತಿಕ ಮೌಲ್ಯಗಳನ್ನು ಬಿತ್ತುವ ಈ ಕಾರ್ಯ ನಿರಂತರವಾಗಿ ರಂಗಭೂಮಿಯಿಂದ ನಡೆಯಲಿ ಎಂದು ಹೇಳಿದರು.</p>.<p>ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಮಾತನಾಡಿ, ಭೂಮಿಕಾ ಹಾರಾಡಿಯ ಪರಿಶ್ರಮವನ್ನು ಆರಂಭದಿಂದಲೂ ಕಂಡಿದ್ದೇನೆ. ಒಂದು ನಾಟಕದಿಂದ ಆರಂಭಗೊಂಡ ಈ ನಾಟಕೋತ್ಸವ ಇಂದು 51 ನಾಟಕಗಳನ್ನು ಪ್ರದರ್ಶನ ಮಾಡಿದೆ. ನಿಜಕ್ಕೂ ಶ್ಲಾಘನೀಯ ಕೆಲಸವನ್ನು ಮಾಡಿದೆ ಎಂದರು.</p>.<p>ಭೂಮಿಕಾದ ಅಧ್ಯಕ್ಷ ಆರ್.ಎಂ. ಸಾಮಗ, ಗೌರವಾಧ್ಯಕ್ಷ ರವಿ ಎಸ್. ಪೂಜಾರಿ, ಕೋಶಾಧಿಕಾರಿ ಶ್ರೀಹರಿ ಭಟ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರೀಶ್ ಕಿರಣ್ ತುಂಗ ಸ್ವಾಗತಿಸಿದರು. ಸಂಚಾಲಕ ಬಿ.ಎಸ್. ರಾಮ್ ಶೆಟ್ಟಿ ಹಾರಾಡಿ ವಂದಿಸಿದರು.</p>.<p>ಸಭಾ ಕಾರ್ಯಕ್ರಮದ ಬಳಿಕ ಭೂಮಿಕಾ ಹಾರಾಡಿ ತಂಡದಿಂದ ‘ಸುಯೋಧನ’ ನಾಟಕ ಪ್ರದರ್ಶನಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-28-1662256459</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>