<p>ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿಯಲ್ಲಿ ಅಕ್ಕಮಹಾದೇವಿ ಜಯಂತಿ ನಡೆಯಿತು.</p>.<p>ತಹಶೀಲ್ದಾರ್ ಮಲ್ಲಪ್ಪ.ಕೆ.ಯರಗೋಳ ಮಾತನಾಡಿ, ಅಕ್ಕ ಮಹಾದೇವಿ ವಚನಗಳ ಮೂಲಕ ಬದುಕಿನ ಮೌಲ್ಯ ಪ್ರತಿಪಾದಿಸಿದರು. ಅವರ ವಚನಗಳ ವಿಚಾರಧಾರೆ ಪ್ರಚಾರವಾಗಬೇಕು. ಉತ್ತಮಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಬೇಕಿದೆ ಎಂದು ಹೇಳಿದರು.</p>.<p>12ನೇ ಶತಮಾನದ ವಚನಕಾರರಲ್ಲಿ ಅಕ್ಕ ಪ್ರಮುಖರು. ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನವನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಎಲ್ಲಾ ಬಂಧನಗಳಿಂದ ಬಿಡುಗಡೆ ಪಡೆದು ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತು ಬದುಕಿದರು ಎಂದು ಸ್ಮರಿಸಿದರು.</p>.<p>ವಚನಕಾರರಲ್ಲಿ ಬಸವಣ್ಣನವರಂತೆ ಮಹಿಳಾ ವಚನಕಾರ್ತಿಯಾಗಿಅಕ್ಕಮಹಾದೇವಿ, ತಮ್ಮ ವಚನಗಳಲ್ಲಿ ಬದುಕಿನ ಮೌಲ್ಯಗಳನ್ನು ಸಾರಿದ್ದಾರೆ. ಆಡಂಬರದ ಜೀವನಕ್ಕೆ ಆಸೆ ಬೀಳದೆ ಸಮಾಜ ಮುಖಿಯಾಗಿ ಬದುಕು ನಡೆಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದು ಅಕ್ಕನ ಬಳಗದ ಪುಷ್ಪಾ ಶಿವಶಂಕರ್ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ನಾಗರತ್ನಮ್ಮ, ಅಕ್ಕನ ಬಳಗ ಮಹಿಳಾ ಮಂಡಳಿ ಅಧ್ಯಕ್ಷೆ ಪಾರ್ವತಮ್ಮ, ರುದ್ರಪ್ಪ, ಕಾರ್ಯದರ್ಶಿ ಮಂಜುಳಾ ಉಮಾಶಂಕರ್, ಭ್ರಮರಾಂಭ,ಶಶಿಕಲಾ, ವೀರಶೈವ ಸಮಾಜದ ಪುಟ್ಟಬಸವರಾಜು, ಆರ್.ಎಸ್.ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-15-1371305201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿಯಲ್ಲಿ ಅಕ್ಕಮಹಾದೇವಿ ಜಯಂತಿ ನಡೆಯಿತು.</p>.<p>ತಹಶೀಲ್ದಾರ್ ಮಲ್ಲಪ್ಪ.ಕೆ.ಯರಗೋಳ ಮಾತನಾಡಿ, ಅಕ್ಕ ಮಹಾದೇವಿ ವಚನಗಳ ಮೂಲಕ ಬದುಕಿನ ಮೌಲ್ಯ ಪ್ರತಿಪಾದಿಸಿದರು. ಅವರ ವಚನಗಳ ವಿಚಾರಧಾರೆ ಪ್ರಚಾರವಾಗಬೇಕು. ಉತ್ತಮಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಬೇಕಿದೆ ಎಂದು ಹೇಳಿದರು.</p>.<p>12ನೇ ಶತಮಾನದ ವಚನಕಾರರಲ್ಲಿ ಅಕ್ಕ ಪ್ರಮುಖರು. ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನವನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಎಲ್ಲಾ ಬಂಧನಗಳಿಂದ ಬಿಡುಗಡೆ ಪಡೆದು ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತು ಬದುಕಿದರು ಎಂದು ಸ್ಮರಿಸಿದರು.</p>.<p>ವಚನಕಾರರಲ್ಲಿ ಬಸವಣ್ಣನವರಂತೆ ಮಹಿಳಾ ವಚನಕಾರ್ತಿಯಾಗಿಅಕ್ಕಮಹಾದೇವಿ, ತಮ್ಮ ವಚನಗಳಲ್ಲಿ ಬದುಕಿನ ಮೌಲ್ಯಗಳನ್ನು ಸಾರಿದ್ದಾರೆ. ಆಡಂಬರದ ಜೀವನಕ್ಕೆ ಆಸೆ ಬೀಳದೆ ಸಮಾಜ ಮುಖಿಯಾಗಿ ಬದುಕು ನಡೆಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದು ಅಕ್ಕನ ಬಳಗದ ಪುಷ್ಪಾ ಶಿವಶಂಕರ್ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ನಾಗರತ್ನಮ್ಮ, ಅಕ್ಕನ ಬಳಗ ಮಹಿಳಾ ಮಂಡಳಿ ಅಧ್ಯಕ್ಷೆ ಪಾರ್ವತಮ್ಮ, ರುದ್ರಪ್ಪ, ಕಾರ್ಯದರ್ಶಿ ಮಂಜುಳಾ ಉಮಾಶಂಕರ್, ಭ್ರಮರಾಂಭ,ಶಶಿಕಲಾ, ವೀರಶೈವ ಸಮಾಜದ ಪುಟ್ಟಬಸವರಾಜು, ಆರ್.ಎಸ್.ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-15-1371305201</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>