<p>ಹೊನ್ನಾವರ: ಭಾರತೀಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಬಹುತ್ವದ ಪರಿಕಲ್ಪನೆ ಇದೆ. ಸಂಗೀತ, ನೃತ್ಯ ಸೇರಿದಂತೆ ವಿವಿಧ ಕಲಾಪ್ರಕಾರಗಳು ಇಲ್ಲಿ ಹಾಸುಹೊಕ್ಕಾಗಿದ್ದು ನಮ್ಮ ಸಂಸ್ಕೃತಿಯ ತಿರುಳಾದ ಸಾಮರಸ್ಯದ ಬದುಕಿನಲ್ಲಿ ನೆಮ್ಮದಿ ಇದೆ’ ಎಂದು ಅಳ್ಳಂಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಎಸ್.ಹೆಗಡೆ ಹಡಿನಬಾಳ ಹೇಳಿದರು.</p>.<p>ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಸ್.ಡಿ.ಎಂ.ಪದವಿ ಕಾಲೇಜಿನಲ್ಲಿ ಕಲಿತು ಕನ್ನಡ ವಿಷಯದಲ್ಲಿ ಬಿ.ಇಡಿ. ಅಥವಾ ಎಂ.ಎ.ಮಾಡುವ ಎರಡು ವಿದ್ಯಾರ್ಥಿಗಳಿಗೆ ಪ್ರತಿವರ್ಷ ಶಿಷ್ಯವೇತನ ನೀಡುತ್ತೇನೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಜಿ.ಎನ್.ಭಟ್ಟ ಮಾತನಾಡಿದರು. ಕ್ರೀಡಾ ವಿಭಾಗದ ಸಲಹೆಗಾರ ಆರ್.ಕೆ.ಮೇಸ್ತ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಕಾರ್ತಿಕ ಗೌಡ, ಎಚ್. ಮನೋಜ, ವೆಂಕಟೇಶ ಭಟ್ ಇದ್ದರು.</p>.<p>ಎಂ.ಜಿ.ಹೆಗಡೆ ಸ್ವಾಗತಿಸಿದರು. ಉಪನ್ಯಾಸಕರಾದ ಮಂಜುನಾಥ ಭಂಡಾರಿ, ಕೆ.ಆರ್.ಶ್ರೀಲತಾ ನಿರೂಪಿಸಿ ದರು. ಡಾ.ಸುರೇಶ ಎಸ್.ವಂದಿಸಿದರು.</p>.<p>ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-20-275102962</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾವರ: ಭಾರತೀಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಬಹುತ್ವದ ಪರಿಕಲ್ಪನೆ ಇದೆ. ಸಂಗೀತ, ನೃತ್ಯ ಸೇರಿದಂತೆ ವಿವಿಧ ಕಲಾಪ್ರಕಾರಗಳು ಇಲ್ಲಿ ಹಾಸುಹೊಕ್ಕಾಗಿದ್ದು ನಮ್ಮ ಸಂಸ್ಕೃತಿಯ ತಿರುಳಾದ ಸಾಮರಸ್ಯದ ಬದುಕಿನಲ್ಲಿ ನೆಮ್ಮದಿ ಇದೆ’ ಎಂದು ಅಳ್ಳಂಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಎಸ್.ಹೆಗಡೆ ಹಡಿನಬಾಳ ಹೇಳಿದರು.</p>.<p>ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಸ್.ಡಿ.ಎಂ.ಪದವಿ ಕಾಲೇಜಿನಲ್ಲಿ ಕಲಿತು ಕನ್ನಡ ವಿಷಯದಲ್ಲಿ ಬಿ.ಇಡಿ. ಅಥವಾ ಎಂ.ಎ.ಮಾಡುವ ಎರಡು ವಿದ್ಯಾರ್ಥಿಗಳಿಗೆ ಪ್ರತಿವರ್ಷ ಶಿಷ್ಯವೇತನ ನೀಡುತ್ತೇನೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಜಿ.ಎನ್.ಭಟ್ಟ ಮಾತನಾಡಿದರು. ಕ್ರೀಡಾ ವಿಭಾಗದ ಸಲಹೆಗಾರ ಆರ್.ಕೆ.ಮೇಸ್ತ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಕಾರ್ತಿಕ ಗೌಡ, ಎಚ್. ಮನೋಜ, ವೆಂಕಟೇಶ ಭಟ್ ಇದ್ದರು.</p>.<p>ಎಂ.ಜಿ.ಹೆಗಡೆ ಸ್ವಾಗತಿಸಿದರು. ಉಪನ್ಯಾಸಕರಾದ ಮಂಜುನಾಥ ಭಂಡಾರಿ, ಕೆ.ಆರ್.ಶ್ರೀಲತಾ ನಿರೂಪಿಸಿ ದರು. ಡಾ.ಸುರೇಶ ಎಸ್.ವಂದಿಸಿದರು.</p>.<p>ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-20-275102962</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>