<p>ನಂಜನಗೂಡು: ‘ಕನ್ನಡ ಭಾಷೆ ಶ್ರೀಮಂತಗೊಳಿಸುವ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿದರು. ಕಸಾಪ ಕೇವಲ ಸಾಹಿತ್ಯದ ವೇದಿಕೆಯಲ್ಲ, ನಮ್ಮ ಕನ್ನಡ ಭಾಷೆಯ ಅಸ್ಮಿತೆ’ ಎಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹೇಳಿದರು.</p>.<p>ನಗರದ ಭಾರತಿ ತೀರ್ಥ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪ್ರಾಂತೀಯ ಭಾಷೆಗಳಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ತಂದುಕೊಡಬೇಕು ಎಂಬ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ, ಆ ಮೂಲಕ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸಲಾಗಿದೆ. ನಾಲ್ವಡಿ ಅವರ ಪರಿಶ್ರಮದಿಂದಾಗಿ ಇಂದು ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ’ ಎಂದು ತಿಳಿಸಿದರು.</p>.<p>‘ಕನ್ನಡಿಗರ ಒಗ್ಗಟ್ಟಿಗೆ ಸಾಕ್ಷಿಯಾದ ಈ ಸಂಸ್ಥೆ, ನೂರು ವರ್ಷ ದಾಟಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ನಾಡು- ನುಡಿಯ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ಪರಿಷತ್ತಿಗೆ ನಾವೆಲ್ಲರೂ ಬೆಂಬಲ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಕನ್ನಡ ಭಾಷೆಯನ್ನು ಹೆಚ್ಚು ಅಧ್ಯಯನ ಮಾಡಬೇಕು’ ಎಂದು ಹೇಳಿದರು.</p>.<p>ಪ್ರಾಂಶುಪಾಲ ದಿನೇಶ್, ‘ವಿದ್ಯಾರ್ಥಿ ಗಳು ಇಂಗ್ಲಿಷ್ ವ್ಯಾಮೋಹ ಹಾಗೂ ಕೀಳರಿಮೆ ಬಿಟ್ಟು, ಶ್ರದ್ಧೆ ಪರಿಶ್ರಮದಿಂದ ಕನ್ನಡ ಭಾಷೆ ಬರೆದು ಓದುವ ಮನಸ್ಥಿತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಲತಾ ಮುದ್ದು ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿ.ವಿ.ರಾಘವೇಂದ್ರ, ಡಾ.ಅನಿತಾ, ಸತೀಶ್ ದಳವಾಯಿ, ರಂಗಸ್ವಾಮಿ, ಶೋಭಾ ನಾಗಶಯನ, ಮಂಜುಳಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-38-2019743738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ‘ಕನ್ನಡ ಭಾಷೆ ಶ್ರೀಮಂತಗೊಳಿಸುವ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿದರು. ಕಸಾಪ ಕೇವಲ ಸಾಹಿತ್ಯದ ವೇದಿಕೆಯಲ್ಲ, ನಮ್ಮ ಕನ್ನಡ ಭಾಷೆಯ ಅಸ್ಮಿತೆ’ ಎಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹೇಳಿದರು.</p>.<p>ನಗರದ ಭಾರತಿ ತೀರ್ಥ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪ್ರಾಂತೀಯ ಭಾಷೆಗಳಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ತಂದುಕೊಡಬೇಕು ಎಂಬ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ, ಆ ಮೂಲಕ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸಲಾಗಿದೆ. ನಾಲ್ವಡಿ ಅವರ ಪರಿಶ್ರಮದಿಂದಾಗಿ ಇಂದು ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ’ ಎಂದು ತಿಳಿಸಿದರು.</p>.<p>‘ಕನ್ನಡಿಗರ ಒಗ್ಗಟ್ಟಿಗೆ ಸಾಕ್ಷಿಯಾದ ಈ ಸಂಸ್ಥೆ, ನೂರು ವರ್ಷ ದಾಟಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ನಾಡು- ನುಡಿಯ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ಪರಿಷತ್ತಿಗೆ ನಾವೆಲ್ಲರೂ ಬೆಂಬಲ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಕನ್ನಡ ಭಾಷೆಯನ್ನು ಹೆಚ್ಚು ಅಧ್ಯಯನ ಮಾಡಬೇಕು’ ಎಂದು ಹೇಳಿದರು.</p>.<p>ಪ್ರಾಂಶುಪಾಲ ದಿನೇಶ್, ‘ವಿದ್ಯಾರ್ಥಿ ಗಳು ಇಂಗ್ಲಿಷ್ ವ್ಯಾಮೋಹ ಹಾಗೂ ಕೀಳರಿಮೆ ಬಿಟ್ಟು, ಶ್ರದ್ಧೆ ಪರಿಶ್ರಮದಿಂದ ಕನ್ನಡ ಭಾಷೆ ಬರೆದು ಓದುವ ಮನಸ್ಥಿತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಲತಾ ಮುದ್ದು ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿ.ವಿ.ರಾಘವೇಂದ್ರ, ಡಾ.ಅನಿತಾ, ಸತೀಶ್ ದಳವಾಯಿ, ರಂಗಸ್ವಾಮಿ, ಶೋಭಾ ನಾಗಶಯನ, ಮಂಜುಳಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-38-2019743738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>