<p>ಸಿದ್ದಾಪುರ: ‘ಚಂಚಲವಾದ ಮನಸ್ಸಿಗೆ ನೆಮ್ಮದಿ ಸಿಗಲು ಕಲೆ ಹಾಗೂ ಸಾಹಿತ್ಯದ ಮೊರೆ ಹೋಗಬೇಕು. ಮನಸ್ಸಿಗೆ ಆನಂದವನ್ನು ನೀಡುವ ಕಲೆಯು ನಮ್ಮ ಬಹು ಅಮೂಲ್ಯ ಆಸ್ತಿ. ಅದನ್ನು ಉಳಿಸಿ ಬೆಳೆಸಿಕೊಳ್ಳಬೇಕಾದ ಹೊಣೆಗಾರಿಕೆ ಎಲ್ಲರದ್ದು’ ಎಂದು ಪತ್ರಕರ್ತ ನಾಗರಾಜ ಭಟ್ಟ ಕೆಕ್ಕಾರು ಹೇಳಿದರು.</p>.<p>ತಾಲ್ಲೂಕಿನ ಬಿದ್ರಕಾನ್ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಸ್ಥಳೀಯ ಕಲಾಭಾಸ್ಕರ ಸಂಸ್ಥೆ ಸಂಸ್ಕೃತಿ ಸಚಿವಾಲಯದ ಯೋಜನೆಯಡಿಯಲ್ಲಿ ಹಮ್ಮಿಕೊಂಡ ನವರಸ ಯಕ್ಷೋತ್ಸವದ ಎರಡನೇ ದಿನ ಶುಕ್ರವಾರ ನಡೆದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.</p>.<p>ಯಕ್ಷಗಾನ ಒಂದು ಪರಿಪೂರ್ಣವಾದ ಕಲಾ ಪ್ರಕಾರವಾಗಿದೆ. ಕಲೆ ಹಾಗೂ ಸಾಹಿತ್ಯಗಳ ಸಮ್ಮಿಳಿತವಾಗಿದೆ. ಹಲವು ಕಲೆಗಳ ಸಂಗಮವಾಗಿದೆ. ಯಕ್ಷಗಾನಕ್ಕೆ ಸಿದ್ದಾಪುರ ತಾಲ್ಲೂಕಿನ ಕೊಡುಗೆ ಅನನ್ಯವಾಗಿದೆ ಎಂದರು.</p>.<p>ಬಿದ್ರಕಾನ್ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶ ಹೆಗಡೆ ಮುತ್ತಿಗೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸಾಮಾಜಿಕ ಕಾರ್ಯಕರ್ತ ಸುಧೀರ ಗೌಡರ್ ಹೆಗ್ಗೋಡ್ಮನೆ, ಜಿ.ಟಿ.ಹೆಗಡೆ ಹಳದೋಟ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಲಾಭಾಸ್ಕರದ ಅಧ್ಯಕ್ಷ ಇಟಗಿ ಮಹಾಬಲೇಶ್ವರ ಭಟ್ಟ ಸ್ವಾಗತಿಸಿದರು. ಕಾರ್ಯದರ್ಶಿ ವಿನಾಯಕ ಹೆಗಡೆ ಕವಲಕೊಪ್ಪ ವಂದಿಸಿದರು.</p>.<p>ನಂತರ ಕವಿ ಕನ್ಯಾನ ವೆಂಕಟರಮಣ ಭಟ್ಟ ವಿರಚಿತ ‘ಭಸ್ಮಾಸುರ ಮೋಹಿನಿ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-20-728971961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ‘ಚಂಚಲವಾದ ಮನಸ್ಸಿಗೆ ನೆಮ್ಮದಿ ಸಿಗಲು ಕಲೆ ಹಾಗೂ ಸಾಹಿತ್ಯದ ಮೊರೆ ಹೋಗಬೇಕು. ಮನಸ್ಸಿಗೆ ಆನಂದವನ್ನು ನೀಡುವ ಕಲೆಯು ನಮ್ಮ ಬಹು ಅಮೂಲ್ಯ ಆಸ್ತಿ. ಅದನ್ನು ಉಳಿಸಿ ಬೆಳೆಸಿಕೊಳ್ಳಬೇಕಾದ ಹೊಣೆಗಾರಿಕೆ ಎಲ್ಲರದ್ದು’ ಎಂದು ಪತ್ರಕರ್ತ ನಾಗರಾಜ ಭಟ್ಟ ಕೆಕ್ಕಾರು ಹೇಳಿದರು.</p>.<p>ತಾಲ್ಲೂಕಿನ ಬಿದ್ರಕಾನ್ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಸ್ಥಳೀಯ ಕಲಾಭಾಸ್ಕರ ಸಂಸ್ಥೆ ಸಂಸ್ಕೃತಿ ಸಚಿವಾಲಯದ ಯೋಜನೆಯಡಿಯಲ್ಲಿ ಹಮ್ಮಿಕೊಂಡ ನವರಸ ಯಕ್ಷೋತ್ಸವದ ಎರಡನೇ ದಿನ ಶುಕ್ರವಾರ ನಡೆದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.</p>.<p>ಯಕ್ಷಗಾನ ಒಂದು ಪರಿಪೂರ್ಣವಾದ ಕಲಾ ಪ್ರಕಾರವಾಗಿದೆ. ಕಲೆ ಹಾಗೂ ಸಾಹಿತ್ಯಗಳ ಸಮ್ಮಿಳಿತವಾಗಿದೆ. ಹಲವು ಕಲೆಗಳ ಸಂಗಮವಾಗಿದೆ. ಯಕ್ಷಗಾನಕ್ಕೆ ಸಿದ್ದಾಪುರ ತಾಲ್ಲೂಕಿನ ಕೊಡುಗೆ ಅನನ್ಯವಾಗಿದೆ ಎಂದರು.</p>.<p>ಬಿದ್ರಕಾನ್ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶ ಹೆಗಡೆ ಮುತ್ತಿಗೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸಾಮಾಜಿಕ ಕಾರ್ಯಕರ್ತ ಸುಧೀರ ಗೌಡರ್ ಹೆಗ್ಗೋಡ್ಮನೆ, ಜಿ.ಟಿ.ಹೆಗಡೆ ಹಳದೋಟ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಲಾಭಾಸ್ಕರದ ಅಧ್ಯಕ್ಷ ಇಟಗಿ ಮಹಾಬಲೇಶ್ವರ ಭಟ್ಟ ಸ್ವಾಗತಿಸಿದರು. ಕಾರ್ಯದರ್ಶಿ ವಿನಾಯಕ ಹೆಗಡೆ ಕವಲಕೊಪ್ಪ ವಂದಿಸಿದರು.</p>.<p>ನಂತರ ಕವಿ ಕನ್ಯಾನ ವೆಂಕಟರಮಣ ಭಟ್ಟ ವಿರಚಿತ ‘ಭಸ್ಮಾಸುರ ಮೋಹಿನಿ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-20-728971961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>