<p>ಬ್ರಹ್ಮಾವರ: ಆಧುನಿಕ ಸಂಗೀತದ ಪ್ರಭಾವ ಹೆಚ್ಚುತ್ತಿರುವ ಕಾರಣ ಜನಪದ ಹಾಡುಗಳು ಮತ್ತು ಜಾನಪದ ಕಲೆಗಳು ನಿಧಾನವಾಗಿ ಮರೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.</p>.<p>ಶ್ರೀ ಬ್ರಾಹ್ಮೀ ಗ್ರೂಪ್ಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದಗಿರಿ ಗುರುಮಿಠಕಲ್ನ ವಿಶ್ವ ಮಾನವ ಫೌಂಡೇಷನ್ ಹಾಗೂ ತಸ್ಮಯ್ ಪ್ರೊಡಕ್ಷನ್ಸ್ ಸಂಯುಕ್ತ ಆಶ್ರಯದಲ್ಲಿ ಕೋಡಿ ಕನ್ಯಾನದಲ್ಲಿ ಈಚೆಗೆ ನಡೆದ ಜನಪದ ಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಅಗಲಿದ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಅವರ ಸೇವೆಯನ್ನು ಸ್ಮರಿಸಿದರು.</p>.<p>ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಮಾತನಾಡಿ, ಜನಪದ ಕಲೆಗಳಿಗೆ, ಯಕ್ಷಗಾನ ಕಲೆಗೂ ಸಮಾನ ಸ್ಥಾನಮಾನವಿದ್ದು, ಯುವಜನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ನಿರ್ಲಕ್ಷ್ಯದಿಂದ ಈ ಕಲೆಗಳಿಗೆ ಹಿನ್ನಡೆಯಾಗುತ್ತಿದೆ. ಅವುಗಳ ಸಂರಕ್ಷಣೆಗಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಜಯರತ್ನ ಚಾರಿಟಬಲ್ ಟ್ರಸ್ಟ್ನ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೃಷ್ಣ ಕಾಂಚನ್, ಶಂಕರ್ ಬಂಗೇರ, ಜಯಂತ ಅಮೀನ್, ರವೀಶ್ ಕುಂದರ್, ರವೀಂದ್ರ ಪೂಜಾರಿ, ಸತೀಶ್ ತಿಂಗಳಾಯ ಇದ್ದರು.</p>.<p>ಕೋಟ ಸುರೇಶ್ ಬಂಗೇರ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೊರಗ ಪೂಜಾರಿ, ಮೈತ್ರಿ ಯುವ ಮಂಡಲದ ಅಧ್ಯಕ್ಷ ರಮೇಶ್ ತಿಂಗಳಾಯ ಹಾಗೂ ರಾಘವೇಂದ್ರ ಕರ್ಕೇರ ಅವರನ್ನು ಸನ್ಮಾನಿಸಲಾಯಿತು.</p>.<p>ಮಂಜುನಾಥ ಹಿಲಿಯಾಣ ನಿರೂಪಿ ಸಿದರು. ವಿವಿಧ ಜನಪದ ತಂಡಗಳಿಂದ ಜನಪದ ನೃತ್ಯಗಳು ಪ್ರದರ್ಶನಗೊಂಡವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-28-668554859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ಆಧುನಿಕ ಸಂಗೀತದ ಪ್ರಭಾವ ಹೆಚ್ಚುತ್ತಿರುವ ಕಾರಣ ಜನಪದ ಹಾಡುಗಳು ಮತ್ತು ಜಾನಪದ ಕಲೆಗಳು ನಿಧಾನವಾಗಿ ಮರೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.</p>.<p>ಶ್ರೀ ಬ್ರಾಹ್ಮೀ ಗ್ರೂಪ್ಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದಗಿರಿ ಗುರುಮಿಠಕಲ್ನ ವಿಶ್ವ ಮಾನವ ಫೌಂಡೇಷನ್ ಹಾಗೂ ತಸ್ಮಯ್ ಪ್ರೊಡಕ್ಷನ್ಸ್ ಸಂಯುಕ್ತ ಆಶ್ರಯದಲ್ಲಿ ಕೋಡಿ ಕನ್ಯಾನದಲ್ಲಿ ಈಚೆಗೆ ನಡೆದ ಜನಪದ ಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಅಗಲಿದ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಅವರ ಸೇವೆಯನ್ನು ಸ್ಮರಿಸಿದರು.</p>.<p>ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಮಾತನಾಡಿ, ಜನಪದ ಕಲೆಗಳಿಗೆ, ಯಕ್ಷಗಾನ ಕಲೆಗೂ ಸಮಾನ ಸ್ಥಾನಮಾನವಿದ್ದು, ಯುವಜನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ನಿರ್ಲಕ್ಷ್ಯದಿಂದ ಈ ಕಲೆಗಳಿಗೆ ಹಿನ್ನಡೆಯಾಗುತ್ತಿದೆ. ಅವುಗಳ ಸಂರಕ್ಷಣೆಗಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಜಯರತ್ನ ಚಾರಿಟಬಲ್ ಟ್ರಸ್ಟ್ನ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೃಷ್ಣ ಕಾಂಚನ್, ಶಂಕರ್ ಬಂಗೇರ, ಜಯಂತ ಅಮೀನ್, ರವೀಶ್ ಕುಂದರ್, ರವೀಂದ್ರ ಪೂಜಾರಿ, ಸತೀಶ್ ತಿಂಗಳಾಯ ಇದ್ದರು.</p>.<p>ಕೋಟ ಸುರೇಶ್ ಬಂಗೇರ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೊರಗ ಪೂಜಾರಿ, ಮೈತ್ರಿ ಯುವ ಮಂಡಲದ ಅಧ್ಯಕ್ಷ ರಮೇಶ್ ತಿಂಗಳಾಯ ಹಾಗೂ ರಾಘವೇಂದ್ರ ಕರ್ಕೇರ ಅವರನ್ನು ಸನ್ಮಾನಿಸಲಾಯಿತು.</p>.<p>ಮಂಜುನಾಥ ಹಿಲಿಯಾಣ ನಿರೂಪಿ ಸಿದರು. ವಿವಿಧ ಜನಪದ ತಂಡಗಳಿಂದ ಜನಪದ ನೃತ್ಯಗಳು ಪ್ರದರ್ಶನಗೊಂಡವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-28-668554859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>