<p>ಉಡುಪಿ: ನಿಸ್ವಾರ್ಥ ಸೇವೆ, ಮಾನವೀಯ ಕಳಕಳಿ ಇಟ್ಟುಕೊಂಡು, ಜನರಿಗೆ ಸಹಾಯ ಮಾಡುತ್ತಾ ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳೆದು ನಿಂತಿರುವ ಸಂಸ್ಥೆ ಸುಮನಸಾ ಕೊಡವೂರು ಎಂದು ಪಡುಬಿದ್ರಿಯ ಯಸ್ಸೆನ್ ಸ್ಪೆಶಲ್ ಎಕಾನೋಮಿಕ್ ಜೋನ್ ಮುಖ್ಯಸ್ಥ ಅಶೋಕ್ ಶೆಟ್ಟಿ ಹೇಳಿದರು.</p>.<p>ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ಮತ್ತು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿಯು ನಗರದ ಐವೈಸಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಸ್ಥೆಯು 31 ತುಳು ನಾಟಕ, 32 ಕನ್ನಡ ನಾಟಕ ಪ್ರದರ್ಶಿಸಿದ್ದಲ್ಲದೆ, ಯಕ್ಷಗಾನವನ್ನೂ ಪ್ರದರ್ಶಿಸುತ್ತ, ಪ್ರೋತ್ಸಾಹಿಸುತ್ತ ಬಂದಿದೆ ಎಂದರು.</p>.<p>ರಜತ ಮಹೋತ್ಸವದ ಕೈಪಿಡಿ ಬಿಡುಗಡೆ ಮಾಡಿದ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಉಡುಪಿಯ ಅಜ್ಜರಕಾಡು ಭುಜಂಗ ಉದ್ಯಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ರಂಗಹಬ್ಬ ನಡೆಸುತ್ತಿರುವ ಏಕೈಕ ಸಂಸ್ಥೆ ಸುಮನಸಾ ಕೊಡವೂರು’ ಎಂದರು.</p>.<p>ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ‘ನಾವೆಲ್ಲ ಜನಪರವಾಗಿ, ಜಾತ್ಯತೀತ, ಸಂವಿಧಾನಬದ್ಧವಾಗಿ ಯೋಚನೆ ಮಾಡುತ್ತೇವೆ ಎಂದರೆ ಅದಕ್ಕೆ ಆಧುನಿಕ ರಂಗಭೂಮಿ ಕಾರಣವಾಗಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಜತ ಸಂಭ್ರಮ ಸಮಿತಿ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿದರು.</p>.<p>ಬುಡ್ನಾರು ಯಕ್ಷ ಸಂಜೀವ ಟ್ರಸ್ಟ್ನ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಲೋಗೊ ಬಿಡುಗಡೆ ಮಾಡಿದರು. ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಗೌರವಾಧ್ಯಕ್ಷ ಎಂ.ಎಸ್. ಭಟ್ ವಂದಿಸಿದರು. ದಯಾನಂದ ಕರ್ಕೇರ ನಿರೂಪಿಸಿದರು.</p>.<p>ರಜತ ಸಂಭ್ರಮ ಸಮಿತಿ ಗೌರವಾಧ್ಯಕ್ಷ ಎಂ.ಎಲ್. ಸಾಮಗ, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಸಂಚಾಲಕ ಭಾಸ್ಕರ ಪಾಲನ್ ಬಾಚನಬೈಲು ಉಪಸ್ಥಿತರಿದ್ದರು.</p>.<p>ಬಳಿಕ ಅಟ್ಟಮಟ್ಟಾ ಬೇಸಿಗೆ ಶಿಬಿರ ವಿದ್ಯಾರ್ಥಿಗಳಿಂದ ಎರಡು ನಾಟಕಗಳು ಪ್ರದರ್ಶನಗೊಂಡವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-28-187935015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ನಿಸ್ವಾರ್ಥ ಸೇವೆ, ಮಾನವೀಯ ಕಳಕಳಿ ಇಟ್ಟುಕೊಂಡು, ಜನರಿಗೆ ಸಹಾಯ ಮಾಡುತ್ತಾ ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳೆದು ನಿಂತಿರುವ ಸಂಸ್ಥೆ ಸುಮನಸಾ ಕೊಡವೂರು ಎಂದು ಪಡುಬಿದ್ರಿಯ ಯಸ್ಸೆನ್ ಸ್ಪೆಶಲ್ ಎಕಾನೋಮಿಕ್ ಜೋನ್ ಮುಖ್ಯಸ್ಥ ಅಶೋಕ್ ಶೆಟ್ಟಿ ಹೇಳಿದರು.</p>.<p>ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ಮತ್ತು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿಯು ನಗರದ ಐವೈಸಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಸ್ಥೆಯು 31 ತುಳು ನಾಟಕ, 32 ಕನ್ನಡ ನಾಟಕ ಪ್ರದರ್ಶಿಸಿದ್ದಲ್ಲದೆ, ಯಕ್ಷಗಾನವನ್ನೂ ಪ್ರದರ್ಶಿಸುತ್ತ, ಪ್ರೋತ್ಸಾಹಿಸುತ್ತ ಬಂದಿದೆ ಎಂದರು.</p>.<p>ರಜತ ಮಹೋತ್ಸವದ ಕೈಪಿಡಿ ಬಿಡುಗಡೆ ಮಾಡಿದ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಉಡುಪಿಯ ಅಜ್ಜರಕಾಡು ಭುಜಂಗ ಉದ್ಯಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ರಂಗಹಬ್ಬ ನಡೆಸುತ್ತಿರುವ ಏಕೈಕ ಸಂಸ್ಥೆ ಸುಮನಸಾ ಕೊಡವೂರು’ ಎಂದರು.</p>.<p>ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ‘ನಾವೆಲ್ಲ ಜನಪರವಾಗಿ, ಜಾತ್ಯತೀತ, ಸಂವಿಧಾನಬದ್ಧವಾಗಿ ಯೋಚನೆ ಮಾಡುತ್ತೇವೆ ಎಂದರೆ ಅದಕ್ಕೆ ಆಧುನಿಕ ರಂಗಭೂಮಿ ಕಾರಣವಾಗಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಜತ ಸಂಭ್ರಮ ಸಮಿತಿ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿದರು.</p>.<p>ಬುಡ್ನಾರು ಯಕ್ಷ ಸಂಜೀವ ಟ್ರಸ್ಟ್ನ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಲೋಗೊ ಬಿಡುಗಡೆ ಮಾಡಿದರು. ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಗೌರವಾಧ್ಯಕ್ಷ ಎಂ.ಎಸ್. ಭಟ್ ವಂದಿಸಿದರು. ದಯಾನಂದ ಕರ್ಕೇರ ನಿರೂಪಿಸಿದರು.</p>.<p>ರಜತ ಸಂಭ್ರಮ ಸಮಿತಿ ಗೌರವಾಧ್ಯಕ್ಷ ಎಂ.ಎಲ್. ಸಾಮಗ, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಸಂಚಾಲಕ ಭಾಸ್ಕರ ಪಾಲನ್ ಬಾಚನಬೈಲು ಉಪಸ್ಥಿತರಿದ್ದರು.</p>.<p>ಬಳಿಕ ಅಟ್ಟಮಟ್ಟಾ ಬೇಸಿಗೆ ಶಿಬಿರ ವಿದ್ಯಾರ್ಥಿಗಳಿಂದ ಎರಡು ನಾಟಕಗಳು ಪ್ರದರ್ಶನಗೊಂಡವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-28-187935015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>