‘ನಿವೇಶನ, ವಸತಿ ಸೌಲಭ್ಯ ಇಲ್ಲದವರಿಗಾಗಿಯೇ ಸರ್ಕಾರಗಳು ಮನೆಗಳನ್ನು ನಿರ್ಮಿಸಿಕೊಳ್ಳಲು ಈ ಯೋಜನೆ ಜಾರಿಗೆ ತಂದಿದೆ. ಅದರ ಮಾನದಂಡಗಳೇನು ಎಂಬುದನ್ನು ತಿಳಿದುಕೊಂಡು ಅರ್ಹರ ಆಯ್ಕೆ ಮಾಡುವ ಮೂಲಕ ನಿರ್ಗತಿಕರಿಗೆ ಸೂರು ಕಲ್ಪಿಸಿ. ಅದನ್ನು ಬಿಟ್ಟು ಏಕಾಏಕಿ ಶಿಸ್ತು ಕ್ರಮಕ್ಕೆ ಮುಂದಾಗುವುದು ಖಂಡಿತ ಸರಿಯಲ್ಲ. ಯಾರಿಗೂ ಅನ್ಯಾಯವಾಗದಂತೆ ಎಚ್ಚರವಹಿಸಿ’ ಎಂದು ಸಲಹೆ ನೀಡಿದರು.