ಹಿರಿಯ ನಾಗರಿಕ ಸೇವೆ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಪರಿಗಣಿಸಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ನೀಡಿರುವ ‘ರಾಷ್ಟ್ರ ಪ್ರಶಸ್ತಿ’ಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶನಿವಾರ ದೆಹಲಿಯಲ್ಲಿ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಉಮಾಶ್ರೀ ಅವರಿಗೆ ಪ್ರದಾನ ಮಾಡಿದರು. ಕೇಂದ್ರ ಸಮಾಜ ಕಲ್ಯಾಣ ಖಾತೆ ರಾಜ್ಯ ಸಚಿವ ಕೃಷ್ಣನ್ ಪಾಲ್ ಗುರ್್ಜಾರ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಇದ್ದರು.