ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಮುಖಂಡ ಸಿ.ಎ.ಶ್ರೀಧರ್ ರಾಜ್ ಅರಸ್, ‘ರಾಜ್ಯದಲ್ಲಿ 30-40 ಕ್ಷತ್ರಿಯ ಪಂಗಡಗಳಿದ್ದು, ಒಂದು ಕೋಟಿಗೂ ಅಧಿಕ ಜನಸಂಖ್ಯೆಯಿದೆ. ಆದರೆ, ನಮ್ಮ ಸಮುದಾಯಕ್ಕೆ ಸಿಗಬೇಕಾದ ರಾಜಕೀಯ ಸ್ಥಾನಮಾನ ಸಿಗುತ್ತಿಲ್ಲ. ನಮ್ಮ ಸಮುದಾಯದವರಾದ ದೇವರಾಜು ಅರಸು ಹಾಗೂ ಧರ್ಮಸಿಂಗ್ ಮುಖ್ಯಮಂತ್ರಿಯಾಗಿ ಅಪಾರವಾದ ಸೇವೆ ಸಲ್ಲಿಸಿದ್ದಾರೆ’ ಎಂದು ಹೇಳಿದರು.