<p><strong>ಬೆಂಗಳೂರು/ಹಾಸನ: </strong>ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗುವುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. </p>.<p>ಬೆಂಗಳೂರಿನ ಪದ್ಮನಾಭನಗರದ ತಮ್ಮ ಮನೆಗೆ ಶನಿವಾರ ಭೇಟಿ ನೀಡಿದ್ದ ಟಿಕೆಟ್ ಆಕಾಂಕ್ಷಿ ಭವಾನಿ ರೇವಣ್ಣ ಬೆಂಬಲಿಗರು ಹಾಗೂ ಹಾಸನ ನಗರಸಭೆಯ ಕೆಲ ಸದಸ್ಯರ ಜತೆ ನಡೆಸಿದ ಮಾತುಕತೆಯಲ್ಲಿ ಅವರು ಅಭಿಪ್ರಾಯ ಹಂಚಿಕೊಂಡರು.</p>.<p>‘ಹಾಸನ ಜಿಲ್ಲೆಯ ಸಂಪೂರ್ಣ ಅರಿವಿದೆ. ಪಕ್ಷದ ಬಲ ಕುಗ್ಗಿಸಲು ಅವಕಾಶ ನೀಡಲ್ಲ. ಪಕ್ಷದ ನಿಷ್ಠಾವಂತರಿಗೆ ಈ ಬಾರಿ ಆದ್ಯತೆ ನೀಡಲಾಗುವುದು’ ಎಂದರು. ಹಾಸನ ಟಿಕೆಟ್ಗಾಗಿ ಭಾರಿ ಪೈಪೋಟಿ ನಡೆದಿರುವ ನಡುವೆಯೇ ಕ್ಷೇತ್ರದ ಪ್ರಮುಖರ ಸಭೆ ಕುತೂಹಲ ಮೂಡಿಸಿತ್ತು. ಪ್ರತೀ ಬಾರಿಯಂತೆ ಈ ಬಾರಿಯೂ ದಾಸ ಒಕ್ಕಲಿಗರಿಗೆ ಟಿಕೆಟ್ ನೀಡಲು ದೇವೇಗೌಡರು ಒಲವು ತೋರಿದ್ದು, ಭವಾನಿ ಅವರಿಗೆ ನಿರಾಸೆ ಆಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. </p>.<p>ಒಂದೆಡೆ, ಎಚ್.ಡಿ.ಕುಮಾರಸ್ವಾಮಿ ಮಾಜಿ ಶಾಸಕ ಎಚ್.ಎಸ್. ಪ್ರಕಾಶ್ ಮಗ ಎಚ್.ಪಿ. ಸ್ವರೂಪ್ಗೆ ಟಿಕೆಟ್ ಕೊಡಲು ಮುಂದಾಗಿದ್ದು, ಎಚ್.ಡಿ.ರೇವಣ್ಣ ಕುಟುಂಬ ಭವಾನಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.</p>.<p>‘ಸ್ವರೂಪ್ಗೆ ಟಿಕೆಟ್ ನೀಡಿದರೆ ಕ್ಷೇತ್ರದಲ್ಲಿ ಪಕ್ಷದ ಮೇಲಿನ ಹಿಡಿತ ತಪ್ಪುತ್ತದೆ’ ಎಂಬ ಆತಂಕ ರೇವಣ್ಣ ಅವರದ್ದು. ಎಚ್.ಡಿ.ಕುಮಾರಸ್ವಾಮಿ, ‘ಬ್ಲ್ಯಾಕ್ಮೇಲ್ಗೆ ಮಣಿಯುವುದಿಲ್ಲ. ನಿರ್ಧಾರದಲ್ಲಿ ಬದಲಾವಣೆ ಇಲ್ಲ’ ಎಂದಿದ್ದಾರೆ.</p>.<p>ಈ ಮಧ್ಯೆ, ದೇವೇಗೌಡರನ್ನು ಭೇಟಿ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ, ‘ಅಮ್ಮನಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದೂ ಹೇಳಿದ್ದಾಗಿ ಗೊತ್ತಾಗಿದೆ.</p>.<p>ಗೊಂದಲಕ್ಕೆ ಒಳಗಾಗಿರುವ ಕಾರ್ಯಕರ್ತರು, ‘ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ. ಯಾರ ಪರ ಕೆಲಸ ಮಾಡಬೇಕೆಂದು ಗೊತ್ತಾಗುತ್ತಿಲ್ಲ’ ಎನ್ನುತ್ತಿದ್ದಾರೆ.</p>.<p>‘ದೇವೇಗೌಡರು ಸೋಮವಾರ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ’ ಎಂದು ಮೂಲಗಳು ತಿಳಿಸಿವೆ.</p>.<p><strong>‘ಪೊಲೀಸ್ ಕಿರುಕುಳ’</strong></p>.<p>ಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ, ಪಕ್ಷ ಸೇರುತ್ತಿರುವ ಇತರೆ ಪಕ್ಷಗಳ ಮುಖಂಡರಿಗೆ ಪೊಲೀಸರನ್ನು ಬಳಸಿ ಕಿರುಕುಳ ನೀಡಲಾಗುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು.</p>.<p>ಯಶವಂತಪುರ ಕ್ಷೇತ್ರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಅವರು ಮಾತನಾಡಿದ ಅವರು, ಚುನಾವಣೆ ಆರಂಭವಾದಾಗಿನಿಂದ ಕಿರುಕುಳ ಜಾಸ್ತಿಯಾಗಿದೆ ಎಂದು ದೂರಿದರು.</p>.<p>‘ಅಧಿಕಾರಿಗಳು ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಜೂನ್ ತಿಂಗಳ ಬಳಿಕ<br />ಪ್ರಾಯಶ್ಚಿತ ಅನುಭವಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಚಿವರ ವಿರುದ್ಧ ಕಿಡಿ: ‘ನಾರಾಯಣಗೌಡರನ್ನು ಬೆಳೆಸಲು ನಮ್ಮ ಪಕ್ಷ ಹಾಳು ಮಾಡಿ ಕೊಳ್ಳಬೇಕಾ? ಅಂಥವರ ಎದುರಿಗೆ ಅಭ್ಯರ್ಥಿ ಹಾಕದೇ ಸಮ್ಮನಿರಲು ಸಾಧ್ಯವೇ?‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು/ಹಾಸನ: </strong>ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗುವುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. </p>.<p>ಬೆಂಗಳೂರಿನ ಪದ್ಮನಾಭನಗರದ ತಮ್ಮ ಮನೆಗೆ ಶನಿವಾರ ಭೇಟಿ ನೀಡಿದ್ದ ಟಿಕೆಟ್ ಆಕಾಂಕ್ಷಿ ಭವಾನಿ ರೇವಣ್ಣ ಬೆಂಬಲಿಗರು ಹಾಗೂ ಹಾಸನ ನಗರಸಭೆಯ ಕೆಲ ಸದಸ್ಯರ ಜತೆ ನಡೆಸಿದ ಮಾತುಕತೆಯಲ್ಲಿ ಅವರು ಅಭಿಪ್ರಾಯ ಹಂಚಿಕೊಂಡರು.</p>.<p>‘ಹಾಸನ ಜಿಲ್ಲೆಯ ಸಂಪೂರ್ಣ ಅರಿವಿದೆ. ಪಕ್ಷದ ಬಲ ಕುಗ್ಗಿಸಲು ಅವಕಾಶ ನೀಡಲ್ಲ. ಪಕ್ಷದ ನಿಷ್ಠಾವಂತರಿಗೆ ಈ ಬಾರಿ ಆದ್ಯತೆ ನೀಡಲಾಗುವುದು’ ಎಂದರು. ಹಾಸನ ಟಿಕೆಟ್ಗಾಗಿ ಭಾರಿ ಪೈಪೋಟಿ ನಡೆದಿರುವ ನಡುವೆಯೇ ಕ್ಷೇತ್ರದ ಪ್ರಮುಖರ ಸಭೆ ಕುತೂಹಲ ಮೂಡಿಸಿತ್ತು. ಪ್ರತೀ ಬಾರಿಯಂತೆ ಈ ಬಾರಿಯೂ ದಾಸ ಒಕ್ಕಲಿಗರಿಗೆ ಟಿಕೆಟ್ ನೀಡಲು ದೇವೇಗೌಡರು ಒಲವು ತೋರಿದ್ದು, ಭವಾನಿ ಅವರಿಗೆ ನಿರಾಸೆ ಆಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. </p>.<p>ಒಂದೆಡೆ, ಎಚ್.ಡಿ.ಕುಮಾರಸ್ವಾಮಿ ಮಾಜಿ ಶಾಸಕ ಎಚ್.ಎಸ್. ಪ್ರಕಾಶ್ ಮಗ ಎಚ್.ಪಿ. ಸ್ವರೂಪ್ಗೆ ಟಿಕೆಟ್ ಕೊಡಲು ಮುಂದಾಗಿದ್ದು, ಎಚ್.ಡಿ.ರೇವಣ್ಣ ಕುಟುಂಬ ಭವಾನಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.</p>.<p>‘ಸ್ವರೂಪ್ಗೆ ಟಿಕೆಟ್ ನೀಡಿದರೆ ಕ್ಷೇತ್ರದಲ್ಲಿ ಪಕ್ಷದ ಮೇಲಿನ ಹಿಡಿತ ತಪ್ಪುತ್ತದೆ’ ಎಂಬ ಆತಂಕ ರೇವಣ್ಣ ಅವರದ್ದು. ಎಚ್.ಡಿ.ಕುಮಾರಸ್ವಾಮಿ, ‘ಬ್ಲ್ಯಾಕ್ಮೇಲ್ಗೆ ಮಣಿಯುವುದಿಲ್ಲ. ನಿರ್ಧಾರದಲ್ಲಿ ಬದಲಾವಣೆ ಇಲ್ಲ’ ಎಂದಿದ್ದಾರೆ.</p>.<p>ಈ ಮಧ್ಯೆ, ದೇವೇಗೌಡರನ್ನು ಭೇಟಿ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ, ‘ಅಮ್ಮನಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದೂ ಹೇಳಿದ್ದಾಗಿ ಗೊತ್ತಾಗಿದೆ.</p>.<p>ಗೊಂದಲಕ್ಕೆ ಒಳಗಾಗಿರುವ ಕಾರ್ಯಕರ್ತರು, ‘ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ. ಯಾರ ಪರ ಕೆಲಸ ಮಾಡಬೇಕೆಂದು ಗೊತ್ತಾಗುತ್ತಿಲ್ಲ’ ಎನ್ನುತ್ತಿದ್ದಾರೆ.</p>.<p>‘ದೇವೇಗೌಡರು ಸೋಮವಾರ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ’ ಎಂದು ಮೂಲಗಳು ತಿಳಿಸಿವೆ.</p>.<p><strong>‘ಪೊಲೀಸ್ ಕಿರುಕುಳ’</strong></p>.<p>ಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ, ಪಕ್ಷ ಸೇರುತ್ತಿರುವ ಇತರೆ ಪಕ್ಷಗಳ ಮುಖಂಡರಿಗೆ ಪೊಲೀಸರನ್ನು ಬಳಸಿ ಕಿರುಕುಳ ನೀಡಲಾಗುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು.</p>.<p>ಯಶವಂತಪುರ ಕ್ಷೇತ್ರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಅವರು ಮಾತನಾಡಿದ ಅವರು, ಚುನಾವಣೆ ಆರಂಭವಾದಾಗಿನಿಂದ ಕಿರುಕುಳ ಜಾಸ್ತಿಯಾಗಿದೆ ಎಂದು ದೂರಿದರು.</p>.<p>‘ಅಧಿಕಾರಿಗಳು ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಜೂನ್ ತಿಂಗಳ ಬಳಿಕ<br />ಪ್ರಾಯಶ್ಚಿತ ಅನುಭವಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಚಿವರ ವಿರುದ್ಧ ಕಿಡಿ: ‘ನಾರಾಯಣಗೌಡರನ್ನು ಬೆಳೆಸಲು ನಮ್ಮ ಪಕ್ಷ ಹಾಳು ಮಾಡಿ ಕೊಳ್ಳಬೇಕಾ? ಅಂಥವರ ಎದುರಿಗೆ ಅಭ್ಯರ್ಥಿ ಹಾಕದೇ ಸಮ್ಮನಿರಲು ಸಾಧ್ಯವೇ?‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>