ಬೆಂಗಳೂರು: ‘ರಾಜ್ಯದಲ್ಲಿ ಪ್ರತಿ ವರ್ಷ 70ರಿಂದ 80 ಸಾವಿರ ಜನರು ಪಾರ್ಶ್ವವಾಯು ಪೀಡಿತರಾಗುತ್ತಿದ್ದಾರೆ’ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕ ಡಾ.ಡಿ. ಗುರುರಾಜ್ ತಿಳಿಸಿದರು.
‘ವಿಶ್ವ ಪಾರ್ಶ್ವವಾಯು ದಿನ’ದ ಪ್ರಯುಕ್ತ ಆರೋಗ್ಯ ಇಲಾಖೆ ಹಾಗೂ ನಿಮ್ಹಾನ್ಸ್ ಜಂಟಿಯಾಗಿ ನಗರದಲ್ಲಿ ಆಯೋಜಿಸಿದ ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ನಿರ್ವಹಣೆ ಕುರಿತು ವೈದ್ಯರು ಹಾಗೂ ನರ್ಸ್ಗಳಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
‘ರಾಜ್ಯದಲ್ಲಿ ಸದ್ಯ 6 ಲಕ್ಷ ಮಂದಿ ಪಾರ್ಶ್ವವಾಯು ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.