<p>ಬಿಸಿಲು ತೀವ್ರವಾಗುತ್ತಿದ್ದಂತೆ ದೂಳು ಮತ್ತು ಮಾಲಿನ್ಯದಿಂದಾಗಿ ಕಣ್ಣುಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚು. </p><p>ಈ ಬೇಸಿಗೆಯಲ್ಲಿ ಕಣ್ಣಿನ ತಪಾಸಣೆ ನಿಯಮಿತ ವಾಗಿರಬೇಕು. ಶುಷ್ಕತೆ, ಕಂಜಕ್ಟಿವಿಟೀಸ್ ಮತ್ತು ಯುವಿ ಕಿರಣಗಳಿಂದ ಕಣ್ಣುಗಳನ್ನು ರಕ್ಷಣೆ ಮಾಡಿಕೊಳ್ಳಬೇಕು. ಬೇಸಿಗೆಯ ಈ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುವುದು ಅನಿವಾರ್ಯ ಎನ್ನುತ್ತಾರೆ ಅಗರ್ವಾಲ್ ಐ ಆಸ್ಪತ್ರೆಯ ಪ್ರಾದೇಶಿಕ ಮುಖ್ಯಸ್ಥ ಡಾ. ಡಿ.ಕೆ.ಶ್ರೀಪತಿ. </p><p>ಬಿರು ಬೇಸಿಗೆಗೆ ಕಣ್ಣಲ್ಲಿ ನೀರಿನ ಉತ್ಪಾದನೆ ಕಡಿಮೆಯಾಗುವುದರಿಂದ ಕಿರಿಕಿರಿ ಉಂಟಾಗುವುದಲ್ಲದೇ ಬ್ಯಾಕ್ಟೀರಿಯಾ ಸೋಂಕು ಹೆಚ್ಚಳವಾಗುತ್ತದೆ. ಇದರಿಂದ ಕ್ಯಾರ್ಯಾಕ್ಟ್ ಮತ್ತು ಮ್ಯಾಕ್ಯುಲರ್ ಡಿಜನರೇಶನ್ನಂಥ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾಗಾಗಿ ಸಕಾಲದಲ್ಲಿ ಕಣ್ಣಿನ ಆರೈಕೆ ಮಾಡಿಕೊಳ್ಳುವುದು ಮುಖ್ಯ ಎನ್ನುತ್ತಾರೆ ಅವರು. </p><p>ಕಣ್ಣುಗಳಲ್ಲಿ ಶುಷ್ಕತೆ ಉಂಟಾದರೆ ವೈದ್ಯರ ಶಿಫಾರಸ್ಸಿನ ಮೇರೆಗೆ ಲ್ಯೂಬ್ರಿಕೆಂಟ್ ಐ ಡ್ರಾಪ್ಗಳನ್ನು ಬಳಸಬಹುದು. ಮೊದಲಿಗೆ ಶುಚಿತ್ವ ಕಾಪಾಡಿಕೊಳ್ಳಬೇಕು. ಆಗಾಗ್ಗೆ ಕೈ ತೊಳೆದುಕೊಳ್ಳಬೇಕು. ವಿನಾಕಾರಣ ಕಣ್ಣನ್ನು ಉಜ್ಜಿಕೊಳ್ಳುವುದು ಕೂಡ ಸೋಂಕಿಗೆ ಕಾರಣವಾಗಬಹುದು. ಕಾಂಟ್ಯಾಕ್ಟ್ ಲೆನ್ಸ್ಗಳನ್ನು ಧರಿಸುವ ವ್ಯಕ್ತಿಗಳು, ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಕಣ್ಣಿನ ದೃಷ್ಟಿಗೆ ತೊಂದರೆಯಾಗದಂತೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಹೇಳಿದ್ದಾರೆ. </p><p>ಯುವಿ ಶೀಲ್ಡ್ ಇರುವ ಕನ್ನಡಕಗಳನ್ನು ಧರಿಸಬೇಕು. ನಿರ್ಜಲೀಕರಣವನ್ನು ತಡೆಯಲು ಸಾಕಷ್ಟು ದ್ರವಾಹಾರವನ್ನು ಸೇವಿಸಬೇಕು. ಕ್ಲೋರಿನೇಟೆಡ್ ನೀರು ಬಳಸುವಾಗ ಕಡ್ಡಾಯವಾಗಿ ಸ್ವಿಮ್ಮಿಂಗ್ ಕನ್ನಡಕಗಳನ್ನು ಧರಿಸಬೇಕು. ಸ್ಕ್ರೀನಿಂಗ್ ಸಮಯವನ್ನು ಕಡಿಮೆ ಮಾಡಿ. ಪ್ರತಿ 20 ನಿಮಿಷಗಳಿಗೊಮ್ಮೆ ವಿರಾಮ ತೆಗೆದುಕೊಳ್ಳಿ. ಎ ವಿಟಮಿನ್ ಇರುವ ಹಣ್ಣು, ತರಕಾರಿಗಳ ಸೇವನೆ ಹೆಚ್ಚಿರಲಿ. ಬೇಸಿಗೆ ಇರಲಿ, ಮಳೆಗಾಲವಿರಲಿ ಕಣ್ಣಿನ ರೋಗಗಳನ್ನು ಸಕಾಲದಲ್ಲಿ ಪತ್ತೆ ಮಾಡಿ, ಚಿಕಿತ್ಸೆ ಪಡೆಯುವುದು ಮುಖ್ಯ ಎನ್ನುತ್ತಾರೆ ಅವರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಸಿಲು ತೀವ್ರವಾಗುತ್ತಿದ್ದಂತೆ ದೂಳು ಮತ್ತು ಮಾಲಿನ್ಯದಿಂದಾಗಿ ಕಣ್ಣುಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚು. </p><p>ಈ ಬೇಸಿಗೆಯಲ್ಲಿ ಕಣ್ಣಿನ ತಪಾಸಣೆ ನಿಯಮಿತ ವಾಗಿರಬೇಕು. ಶುಷ್ಕತೆ, ಕಂಜಕ್ಟಿವಿಟೀಸ್ ಮತ್ತು ಯುವಿ ಕಿರಣಗಳಿಂದ ಕಣ್ಣುಗಳನ್ನು ರಕ್ಷಣೆ ಮಾಡಿಕೊಳ್ಳಬೇಕು. ಬೇಸಿಗೆಯ ಈ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುವುದು ಅನಿವಾರ್ಯ ಎನ್ನುತ್ತಾರೆ ಅಗರ್ವಾಲ್ ಐ ಆಸ್ಪತ್ರೆಯ ಪ್ರಾದೇಶಿಕ ಮುಖ್ಯಸ್ಥ ಡಾ. ಡಿ.ಕೆ.ಶ್ರೀಪತಿ. </p><p>ಬಿರು ಬೇಸಿಗೆಗೆ ಕಣ್ಣಲ್ಲಿ ನೀರಿನ ಉತ್ಪಾದನೆ ಕಡಿಮೆಯಾಗುವುದರಿಂದ ಕಿರಿಕಿರಿ ಉಂಟಾಗುವುದಲ್ಲದೇ ಬ್ಯಾಕ್ಟೀರಿಯಾ ಸೋಂಕು ಹೆಚ್ಚಳವಾಗುತ್ತದೆ. ಇದರಿಂದ ಕ್ಯಾರ್ಯಾಕ್ಟ್ ಮತ್ತು ಮ್ಯಾಕ್ಯುಲರ್ ಡಿಜನರೇಶನ್ನಂಥ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾಗಾಗಿ ಸಕಾಲದಲ್ಲಿ ಕಣ್ಣಿನ ಆರೈಕೆ ಮಾಡಿಕೊಳ್ಳುವುದು ಮುಖ್ಯ ಎನ್ನುತ್ತಾರೆ ಅವರು. </p><p>ಕಣ್ಣುಗಳಲ್ಲಿ ಶುಷ್ಕತೆ ಉಂಟಾದರೆ ವೈದ್ಯರ ಶಿಫಾರಸ್ಸಿನ ಮೇರೆಗೆ ಲ್ಯೂಬ್ರಿಕೆಂಟ್ ಐ ಡ್ರಾಪ್ಗಳನ್ನು ಬಳಸಬಹುದು. ಮೊದಲಿಗೆ ಶುಚಿತ್ವ ಕಾಪಾಡಿಕೊಳ್ಳಬೇಕು. ಆಗಾಗ್ಗೆ ಕೈ ತೊಳೆದುಕೊಳ್ಳಬೇಕು. ವಿನಾಕಾರಣ ಕಣ್ಣನ್ನು ಉಜ್ಜಿಕೊಳ್ಳುವುದು ಕೂಡ ಸೋಂಕಿಗೆ ಕಾರಣವಾಗಬಹುದು. ಕಾಂಟ್ಯಾಕ್ಟ್ ಲೆನ್ಸ್ಗಳನ್ನು ಧರಿಸುವ ವ್ಯಕ್ತಿಗಳು, ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಕಣ್ಣಿನ ದೃಷ್ಟಿಗೆ ತೊಂದರೆಯಾಗದಂತೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಹೇಳಿದ್ದಾರೆ. </p><p>ಯುವಿ ಶೀಲ್ಡ್ ಇರುವ ಕನ್ನಡಕಗಳನ್ನು ಧರಿಸಬೇಕು. ನಿರ್ಜಲೀಕರಣವನ್ನು ತಡೆಯಲು ಸಾಕಷ್ಟು ದ್ರವಾಹಾರವನ್ನು ಸೇವಿಸಬೇಕು. ಕ್ಲೋರಿನೇಟೆಡ್ ನೀರು ಬಳಸುವಾಗ ಕಡ್ಡಾಯವಾಗಿ ಸ್ವಿಮ್ಮಿಂಗ್ ಕನ್ನಡಕಗಳನ್ನು ಧರಿಸಬೇಕು. ಸ್ಕ್ರೀನಿಂಗ್ ಸಮಯವನ್ನು ಕಡಿಮೆ ಮಾಡಿ. ಪ್ರತಿ 20 ನಿಮಿಷಗಳಿಗೊಮ್ಮೆ ವಿರಾಮ ತೆಗೆದುಕೊಳ್ಳಿ. ಎ ವಿಟಮಿನ್ ಇರುವ ಹಣ್ಣು, ತರಕಾರಿಗಳ ಸೇವನೆ ಹೆಚ್ಚಿರಲಿ. ಬೇಸಿಗೆ ಇರಲಿ, ಮಳೆಗಾಲವಿರಲಿ ಕಣ್ಣಿನ ರೋಗಗಳನ್ನು ಸಕಾಲದಲ್ಲಿ ಪತ್ತೆ ಮಾಡಿ, ಚಿಕಿತ್ಸೆ ಪಡೆಯುವುದು ಮುಖ್ಯ ಎನ್ನುತ್ತಾರೆ ಅವರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>